BREAKING NEWS

ನೀರಿನ ರಭಸಕ್ಕೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾದಂತಾಗಿದೆ. ನಗರದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿತ್ತು. ಇದೀಗ ಮಳೆಯ ನಡುವೆ ಹುಚ್ಚಾಟ ಮೆರೆಯಲು ಹೋದ ಯುವಕನೊಬ್ಬ ಬಲಿಯಾಗಿದ್ದು, ಬ್ಯಾಟರಾಯನಪುರದ ರಾಜಕಾಲುವೆ ಬಳಿ ಮೃತದೇಹ ಪತ್ತೆಯಾಗಿದೆ.

ನಿನ್ನೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ. ಲೋಕೇಶ್ (27) ಸಾವನ್ನಪ್ಪಿದ ಯುವಕ. ಜೋರಾದ ಗಾಳಿ ಮಳೆಯ ಸಂದರ್ಭದಲ್ಲಿ ಕೆ.ಪಿ.ಅಗ್ರಹಾರದ ರಾಜಕಾಲುವೆಗೆ ಲೋಕೇಶ್ ಇಳಿದಿದ್ದಾನೆ. ಅಲ್ಲಿದ್ದ ಸಾರ್ವಜನಿಕರು ತಡೆದರೂ, ಆಳ ನೋಡಲು ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಲೋಕೇಶ್ ಕೊಚ್ಚಿ ಹೋಗಿದ್ದಾನೆ. ಕೂಡಲೇ ಯುವಕನ ಪತ್ತೆಕಾರ್ಯ ನಡೆಸಲಾಗಿತ್ತಾದರೂ, ಇಂದು ಬ್ಯಾಟರಾಯನಪುರದ ರಾಜಕಾಲುವೆ ಬಳಿ ಲೋಕೇಶ್ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ UDR ದಾಖಲಾಗಿದೆ.

ಬಿಬಿಎಂಪಿ ವಿರುದ್ಧ ಜನರ ಆಕ್ರೋಶ : ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ನಗರದ ಜನರು ಕಂಗಾಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚರಂಡಿಗಳು, ರಾಜಕಾಲುವೆಗಳ ಹೂಳೆತ್ತುವ ಕೆಲಸ ಆಗಿಲ್ಲ. ಒಟ್ಟು ನಗರದ 10ಕ್ಕೂ ಹೆಚ್ಚು ಅಂಡರ್ ಪಾಸ್‌ಗಳಲ್ಲಿ ಸಮಸ್ಯೆ ಉಂಟಾಗುತ್ತಿದೆ. ನಗರದಲ್ಲಿ 826 ಕಿ.ಮೀ ರಾಜಕಾಲುವೆ ಇದ್ದು, 400 ಕಿ.ಮಿ.ನಷ್ಟು ಮಾತ್ರ ಹೂಳೆತ್ತುವ ಕೆಲಸ ಆಗಿದೆ. ಇನ್ನೂ 427 ಕಿ.ಮೀ ಹೂಳೆತ್ತುವ ಕೆಲಸ ಬಿಬಿಎಂಪಿ ಮಾಡಿಲ್ಲ. ಚುನಾವಣೆ ನೀತಿ ಸಂಹಿತೆಯಿಂದಾಗಿ ಯಾವುದೇ ಕೆಲಸ ಕಾರ್ಯಗಳು ನಡೆದಿಲ್ಲ. ನಗರದ ಹಲವು ಕಡೆ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

21 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

21 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

21 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

21 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

21 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

21 hours ago