BREAKING NEWS

ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ ಆಕಸ್ಮಿಕವಲ್ಲ, ಷಡ್ಯಂತ್ರ: ಕಾಂಗ್ರೆಸ್

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ.

ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ ಎಂದು ದೂರಿದೆ.

40 ಪರ್ಸೆಂಟ್ ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಮತ್ತು ಇದರ ಹಿಂದಿರುವ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್ ಗುಡುಗಿದೆ.

ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬಿಬಿಎಂಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಎಂಟು ನೌಕರರಿಗೆ ಗಾಯವಾಗಿದೆ, ಮೂರು ಜನರ ಸ್ಥಿತಿ ಗಂಭೀರವಾಗಿದೆ, ಇವರೆಲ್ಲರಿಗೂ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.

ತನಿಖೆಗೆ ಹೆದರಿದ ಭ್ರಷ್ಟರು ನಡೆಸಿದ ಇಂತಹ ಹೀನ ಕೃತ್ಯದ ಹಿಂದಿರುವ ಕೈಗಳಿಗೆ ಕೊಳ ತೊಡಿಸುವುದು ಖಚಿತ.

ಈ ಹಿಂದೆ ಬಿಜೆಪಿ ಆಡಳಿತವಧಿಯಲ್ಲಿ ಬಿಬಿಎಂಪಿಗೆ ಬೆಂಕಿ ಇಟ್ಟವರೇ ಇಂದೂ ಸಹ ಇಟ್ಟಿದ್ದಾರೆ ಎಂಬ ಗುಮಾನಿ ಹೆಚ್ಚಿದೆ.

ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ತೆರೆಮರೆಯಲ್ಲಿರುವ ಭ್ರಷ್ಟರನ್ನು ಬಯಲಿಗೆಳೆಯುತ್ತೇವೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

andolanait

Recent Posts

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

35 seconds ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

10 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

21 mins ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

32 mins ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

50 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

57 mins ago