BREAKING NEWS

ಬಿಬಿಎಂಪಿ ಕಚೇರಿಯ ದಾಖಲೆ ಇದ್ದ ಕೊಠಡಿಗೆ ಬೆಂಕಿ ಆಕಸ್ಮಿಕವಲ್ಲ, ಷಡ್ಯಂತ್ರ: ಕಾಂಗ್ರೆಸ್

ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್‌ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ.

ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ ಎಂದು ದೂರಿದೆ.

40 ಪರ್ಸೆಂಟ್ ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಮತ್ತು ಇದರ ಹಿಂದಿರುವ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್ ಗುಡುಗಿದೆ.

ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬಿಬಿಎಂಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಎಂಟು ನೌಕರರಿಗೆ ಗಾಯವಾಗಿದೆ, ಮೂರು ಜನರ ಸ್ಥಿತಿ ಗಂಭೀರವಾಗಿದೆ, ಇವರೆಲ್ಲರಿಗೂ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.

ತನಿಖೆಗೆ ಹೆದರಿದ ಭ್ರಷ್ಟರು ನಡೆಸಿದ ಇಂತಹ ಹೀನ ಕೃತ್ಯದ ಹಿಂದಿರುವ ಕೈಗಳಿಗೆ ಕೊಳ ತೊಡಿಸುವುದು ಖಚಿತ.

ಈ ಹಿಂದೆ ಬಿಜೆಪಿ ಆಡಳಿತವಧಿಯಲ್ಲಿ ಬಿಬಿಎಂಪಿಗೆ ಬೆಂಕಿ ಇಟ್ಟವರೇ ಇಂದೂ ಸಹ ಇಟ್ಟಿದ್ದಾರೆ ಎಂಬ ಗುಮಾನಿ ಹೆಚ್ಚಿದೆ.

ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ತೆರೆಮರೆಯಲ್ಲಿರುವ ಭ್ರಷ್ಟರನ್ನು ಬಯಲಿಗೆಳೆಯುತ್ತೇವೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.

andolanait

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

1 hour ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

6 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

6 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

6 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

6 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

7 hours ago