ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಆವರಣದಲ್ಲಿರುವ ಗುಣಮಟ್ಟ ನಿಯಂತ್ರಣ ವಿಭಾಗದ ಲ್ಯಾಬ್ ಮತ್ತು ಕಚೇರಿ ಕಟ್ಟಡಕ್ಕೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ. ಇದು ಷಡ್ಯಂತ್ರ ಎಂದು ಆಡಳಿತರೂಢ ಕಾಂಗ್ರೆಸ್ ಆರೋಪಿಸಿದೆ.
ಅಗ್ನಿ ಅವಘಡ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ ಎಂದು ದೂರಿದೆ.
40 ಪರ್ಸೆಂಟ್ ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಮತ್ತು ಇದರ ಹಿಂದಿರುವ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್ ಗುಡುಗಿದೆ.
ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿಬಿಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಬಿಬಿಎಂಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಎಂಟು ನೌಕರರಿಗೆ ಗಾಯವಾಗಿದೆ, ಮೂರು ಜನರ ಸ್ಥಿತಿ ಗಂಭೀರವಾಗಿದೆ, ಇವರೆಲ್ಲರಿಗೂ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ.
ತನಿಖೆಗೆ ಹೆದರಿದ ಭ್ರಷ್ಟರು ನಡೆಸಿದ ಇಂತಹ ಹೀನ ಕೃತ್ಯದ ಹಿಂದಿರುವ ಕೈಗಳಿಗೆ ಕೊಳ ತೊಡಿಸುವುದು ಖಚಿತ.
ಈ ಹಿಂದೆ ಬಿಜೆಪಿ ಆಡಳಿತವಧಿಯಲ್ಲಿ ಬಿಬಿಎಂಪಿಗೆ ಬೆಂಕಿ ಇಟ್ಟವರೇ ಇಂದೂ ಸಹ ಇಟ್ಟಿದ್ದಾರೆ ಎಂಬ ಗುಮಾನಿ ಹೆಚ್ಚಿದೆ.
ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ತೆರೆಮರೆಯಲ್ಲಿರುವ ಭ್ರಷ್ಟರನ್ನು ಬಯಲಿಗೆಳೆಯುತ್ತೇವೆ ಎಂದು ಮತ್ತೊಂದು ಟ್ವೀಟ್ ಮಾಡಿದೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…