BREAKING NEWS

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ರಷ್ಯಾದಲ್ಲಿ ಬಿಡುಗಡೆ

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ.

ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ ಕಥಾಹಂದರವನ್ನು ಚಿತ್ರ ‘ದಿ ಚಾಲೆಂಜ್’ ಒಳಗೊಂಡಿದೆ.

ಐಎಸ್‌ಎಸ್‌ನ ಕಕ್ಷೆಯ ಪ್ರಯೋಗಾಲಯದಲ್ಲಿ ದೃಶ್ಯಗಳನ್ನು ಚಿತ್ರೀಕರಿಸಲು ಅಕ್ಟೋಬರ್ 2021ರಲ್ಲಿ 12 ದಿನಗಳ ಅವಧಿಗೆ ನಟಿ ಮತ್ತು ಚಲನಚಿತ್ರ ನಿರ್ದೇಶಕರನ್ನು ರಷ್ಯಾ ಬಾಹ್ಯಾಕಾಶಕ್ಕೆ ಕಳುಹಿಸಿತ್ತು.

2020ರಲ್ಲಿ ಮಿಷನ್ ಇಂಪಾಸಿಬಲ್ ಸ್ಟಾರ್ ಟಾಮ್ ಕ್ರೂಸ್ ಅವರು ನಾಸಾ ಮತ್ತು ಎಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನೊಂದಿಗೆ ಘೋಷಿಸಿದ ಹಾಲಿವುಡ್ ಸಿನಿಮಾಗೂ ಮುನ್ನವೇ ರಷ್ಯಾ ಸಿನಿಮಾ ತೆರೆಗೆ ಬರುವ ಮೂಲಕ ಹೊಸ ದಾಖಲೆ ಬರೆದಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚಲನಚಿತ್ರವನ್ನು ಶ್ಲಾಘಿಸಿದ್ದಾರೆ: ‘ನಾವು ಬಾಹ್ಯಾಕಾಶದ ಕಕ್ಷೆಯಲ್ಲಿ ಚಲನಚಿತ್ರವನ್ನು ಚಿತ್ರೀಕರಿಸಿದ ಮೊದಲಿಗರು. ಮತ್ತೊಮ್ಮೆ ನಾವು ಮೊದಲಿಗರು’ ಎಂದು ಹೇಳಿದ್ದಾರೆ.

ದಿ ಚಾಲೆಂಜ್‌ನಲ್ಲಿ ರಷ್ಯಾದ ಅತ್ಯಂತ ಮನಮೋಹಕ ನಟಿಯರಲ್ಲಿ ಒಬ್ಬರಾದ 38 ವರ್ಷದ ಯುಲಿಯಾ ಪೆರೆಸಿಲ್ಡ್ ವೈದ್ಯೆ ಪಾತ್ರ ನಿರ್ವಹಿಸಿದ್ದಾರೆ.

ಕ್ಯಾಮೆರಾ, ಲೈಟಿಂಗ್ ಮತ್ತು ಸೌಂಡ್ ಉಸ್ತುವಾರಿ ವಹಿಸಿದ್ದ ನಿರ್ದೇಶಕ ಕ್ಲಿಮ್ ಶಿಪೆಂಕೊ, 30 ಗಂಟೆಗಳ ಚಿತ್ರೀಕರಣದ ಫೊಟೇಜ್ ತಂದಿದ್ದರು. ಅದರಲ್ಲಿ 50 ನಿಮಿಷಗಳ ದೃಶ್ಯವನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಪೆರೆಸಿಲ್ಡ್ ಮತ್ತು ಶಿಪೆಂಕೊ ಅವರು ಗಗನಯಾತ್ರಿಯೊಂದಿಗೆ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹೋಗುವ ಮೊದಲು ನಾಲ್ಕು ತಿಂಗಳ ಕಾಲ ತರಬೇತಿ ಪಡೆದಿದ್ದರು.

andolanait

Recent Posts

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

14 mins ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

1 hour ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

2 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

2 hours ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

3 hours ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

3 hours ago