BREAKING NEWS

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ರಷ್ಯಾದಲ್ಲಿ ಬಿಡುಗಡೆ

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ.

ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ ಕಥಾಹಂದರವನ್ನು ಚಿತ್ರ ‘ದಿ ಚಾಲೆಂಜ್’ ಒಳಗೊಂಡಿದೆ.

ಐಎಸ್‌ಎಸ್‌ನ ಕಕ್ಷೆಯ ಪ್ರಯೋಗಾಲಯದಲ್ಲಿ ದೃಶ್ಯಗಳನ್ನು ಚಿತ್ರೀಕರಿಸಲು ಅಕ್ಟೋಬರ್ 2021ರಲ್ಲಿ 12 ದಿನಗಳ ಅವಧಿಗೆ ನಟಿ ಮತ್ತು ಚಲನಚಿತ್ರ ನಿರ್ದೇಶಕರನ್ನು ರಷ್ಯಾ ಬಾಹ್ಯಾಕಾಶಕ್ಕೆ ಕಳುಹಿಸಿತ್ತು.

2020ರಲ್ಲಿ ಮಿಷನ್ ಇಂಪಾಸಿಬಲ್ ಸ್ಟಾರ್ ಟಾಮ್ ಕ್ರೂಸ್ ಅವರು ನಾಸಾ ಮತ್ತು ಎಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನೊಂದಿಗೆ ಘೋಷಿಸಿದ ಹಾಲಿವುಡ್ ಸಿನಿಮಾಗೂ ಮುನ್ನವೇ ರಷ್ಯಾ ಸಿನಿಮಾ ತೆರೆಗೆ ಬರುವ ಮೂಲಕ ಹೊಸ ದಾಖಲೆ ಬರೆದಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚಲನಚಿತ್ರವನ್ನು ಶ್ಲಾಘಿಸಿದ್ದಾರೆ: ‘ನಾವು ಬಾಹ್ಯಾಕಾಶದ ಕಕ್ಷೆಯಲ್ಲಿ ಚಲನಚಿತ್ರವನ್ನು ಚಿತ್ರೀಕರಿಸಿದ ಮೊದಲಿಗರು. ಮತ್ತೊಮ್ಮೆ ನಾವು ಮೊದಲಿಗರು’ ಎಂದು ಹೇಳಿದ್ದಾರೆ.

ದಿ ಚಾಲೆಂಜ್‌ನಲ್ಲಿ ರಷ್ಯಾದ ಅತ್ಯಂತ ಮನಮೋಹಕ ನಟಿಯರಲ್ಲಿ ಒಬ್ಬರಾದ 38 ವರ್ಷದ ಯುಲಿಯಾ ಪೆರೆಸಿಲ್ಡ್ ವೈದ್ಯೆ ಪಾತ್ರ ನಿರ್ವಹಿಸಿದ್ದಾರೆ.

ಕ್ಯಾಮೆರಾ, ಲೈಟಿಂಗ್ ಮತ್ತು ಸೌಂಡ್ ಉಸ್ತುವಾರಿ ವಹಿಸಿದ್ದ ನಿರ್ದೇಶಕ ಕ್ಲಿಮ್ ಶಿಪೆಂಕೊ, 30 ಗಂಟೆಗಳ ಚಿತ್ರೀಕರಣದ ಫೊಟೇಜ್ ತಂದಿದ್ದರು. ಅದರಲ್ಲಿ 50 ನಿಮಿಷಗಳ ದೃಶ್ಯವನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಪೆರೆಸಿಲ್ಡ್ ಮತ್ತು ಶಿಪೆಂಕೊ ಅವರು ಗಗನಯಾತ್ರಿಯೊಂದಿಗೆ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹೋಗುವ ಮೊದಲು ನಾಲ್ಕು ತಿಂಗಳ ಕಾಲ ತರಬೇತಿ ಪಡೆದಿದ್ದರು.

andolanait

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

4 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

5 hours ago