BREAKING NEWS

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ರಷ್ಯಾದಲ್ಲಿ ಬಿಡುಗಡೆ

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ.

ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ ಕಥಾಹಂದರವನ್ನು ಚಿತ್ರ ‘ದಿ ಚಾಲೆಂಜ್’ ಒಳಗೊಂಡಿದೆ.

ಐಎಸ್‌ಎಸ್‌ನ ಕಕ್ಷೆಯ ಪ್ರಯೋಗಾಲಯದಲ್ಲಿ ದೃಶ್ಯಗಳನ್ನು ಚಿತ್ರೀಕರಿಸಲು ಅಕ್ಟೋಬರ್ 2021ರಲ್ಲಿ 12 ದಿನಗಳ ಅವಧಿಗೆ ನಟಿ ಮತ್ತು ಚಲನಚಿತ್ರ ನಿರ್ದೇಶಕರನ್ನು ರಷ್ಯಾ ಬಾಹ್ಯಾಕಾಶಕ್ಕೆ ಕಳುಹಿಸಿತ್ತು.

2020ರಲ್ಲಿ ಮಿಷನ್ ಇಂಪಾಸಿಬಲ್ ಸ್ಟಾರ್ ಟಾಮ್ ಕ್ರೂಸ್ ಅವರು ನಾಸಾ ಮತ್ತು ಎಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನೊಂದಿಗೆ ಘೋಷಿಸಿದ ಹಾಲಿವುಡ್ ಸಿನಿಮಾಗೂ ಮುನ್ನವೇ ರಷ್ಯಾ ಸಿನಿಮಾ ತೆರೆಗೆ ಬರುವ ಮೂಲಕ ಹೊಸ ದಾಖಲೆ ಬರೆದಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚಲನಚಿತ್ರವನ್ನು ಶ್ಲಾಘಿಸಿದ್ದಾರೆ: ‘ನಾವು ಬಾಹ್ಯಾಕಾಶದ ಕಕ್ಷೆಯಲ್ಲಿ ಚಲನಚಿತ್ರವನ್ನು ಚಿತ್ರೀಕರಿಸಿದ ಮೊದಲಿಗರು. ಮತ್ತೊಮ್ಮೆ ನಾವು ಮೊದಲಿಗರು’ ಎಂದು ಹೇಳಿದ್ದಾರೆ.

ದಿ ಚಾಲೆಂಜ್‌ನಲ್ಲಿ ರಷ್ಯಾದ ಅತ್ಯಂತ ಮನಮೋಹಕ ನಟಿಯರಲ್ಲಿ ಒಬ್ಬರಾದ 38 ವರ್ಷದ ಯುಲಿಯಾ ಪೆರೆಸಿಲ್ಡ್ ವೈದ್ಯೆ ಪಾತ್ರ ನಿರ್ವಹಿಸಿದ್ದಾರೆ.

ಕ್ಯಾಮೆರಾ, ಲೈಟಿಂಗ್ ಮತ್ತು ಸೌಂಡ್ ಉಸ್ತುವಾರಿ ವಹಿಸಿದ್ದ ನಿರ್ದೇಶಕ ಕ್ಲಿಮ್ ಶಿಪೆಂಕೊ, 30 ಗಂಟೆಗಳ ಚಿತ್ರೀಕರಣದ ಫೊಟೇಜ್ ತಂದಿದ್ದರು. ಅದರಲ್ಲಿ 50 ನಿಮಿಷಗಳ ದೃಶ್ಯವನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಪೆರೆಸಿಲ್ಡ್ ಮತ್ತು ಶಿಪೆಂಕೊ ಅವರು ಗಗನಯಾತ್ರಿಯೊಂದಿಗೆ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹೋಗುವ ಮೊದಲು ನಾಲ್ಕು ತಿಂಗಳ ಕಾಲ ತರಬೇತಿ ಪಡೆದಿದ್ದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago