BREAKING NEWS

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ರಷ್ಯಾದಲ್ಲಿ ಬಿಡುಗಡೆ

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ.

ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ ಕಥಾಹಂದರವನ್ನು ಚಿತ್ರ ‘ದಿ ಚಾಲೆಂಜ್’ ಒಳಗೊಂಡಿದೆ.

ಐಎಸ್‌ಎಸ್‌ನ ಕಕ್ಷೆಯ ಪ್ರಯೋಗಾಲಯದಲ್ಲಿ ದೃಶ್ಯಗಳನ್ನು ಚಿತ್ರೀಕರಿಸಲು ಅಕ್ಟೋಬರ್ 2021ರಲ್ಲಿ 12 ದಿನಗಳ ಅವಧಿಗೆ ನಟಿ ಮತ್ತು ಚಲನಚಿತ್ರ ನಿರ್ದೇಶಕರನ್ನು ರಷ್ಯಾ ಬಾಹ್ಯಾಕಾಶಕ್ಕೆ ಕಳುಹಿಸಿತ್ತು.

2020ರಲ್ಲಿ ಮಿಷನ್ ಇಂಪಾಸಿಬಲ್ ಸ್ಟಾರ್ ಟಾಮ್ ಕ್ರೂಸ್ ಅವರು ನಾಸಾ ಮತ್ತು ಎಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನೊಂದಿಗೆ ಘೋಷಿಸಿದ ಹಾಲಿವುಡ್ ಸಿನಿಮಾಗೂ ಮುನ್ನವೇ ರಷ್ಯಾ ಸಿನಿಮಾ ತೆರೆಗೆ ಬರುವ ಮೂಲಕ ಹೊಸ ದಾಖಲೆ ಬರೆದಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚಲನಚಿತ್ರವನ್ನು ಶ್ಲಾಘಿಸಿದ್ದಾರೆ: ‘ನಾವು ಬಾಹ್ಯಾಕಾಶದ ಕಕ್ಷೆಯಲ್ಲಿ ಚಲನಚಿತ್ರವನ್ನು ಚಿತ್ರೀಕರಿಸಿದ ಮೊದಲಿಗರು. ಮತ್ತೊಮ್ಮೆ ನಾವು ಮೊದಲಿಗರು’ ಎಂದು ಹೇಳಿದ್ದಾರೆ.

ದಿ ಚಾಲೆಂಜ್‌ನಲ್ಲಿ ರಷ್ಯಾದ ಅತ್ಯಂತ ಮನಮೋಹಕ ನಟಿಯರಲ್ಲಿ ಒಬ್ಬರಾದ 38 ವರ್ಷದ ಯುಲಿಯಾ ಪೆರೆಸಿಲ್ಡ್ ವೈದ್ಯೆ ಪಾತ್ರ ನಿರ್ವಹಿಸಿದ್ದಾರೆ.

ಕ್ಯಾಮೆರಾ, ಲೈಟಿಂಗ್ ಮತ್ತು ಸೌಂಡ್ ಉಸ್ತುವಾರಿ ವಹಿಸಿದ್ದ ನಿರ್ದೇಶಕ ಕ್ಲಿಮ್ ಶಿಪೆಂಕೊ, 30 ಗಂಟೆಗಳ ಚಿತ್ರೀಕರಣದ ಫೊಟೇಜ್ ತಂದಿದ್ದರು. ಅದರಲ್ಲಿ 50 ನಿಮಿಷಗಳ ದೃಶ್ಯವನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಪೆರೆಸಿಲ್ಡ್ ಮತ್ತು ಶಿಪೆಂಕೊ ಅವರು ಗಗನಯಾತ್ರಿಯೊಂದಿಗೆ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹೋಗುವ ಮೊದಲು ನಾಲ್ಕು ತಿಂಗಳ ಕಾಲ ತರಬೇತಿ ಪಡೆದಿದ್ದರು.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

51 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

5 hours ago