BREAKING NEWS

ಬಾಹ್ಯಾಕಾಶದಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ರಷ್ಯಾದಲ್ಲಿ ಬಿಡುಗಡೆ

ಮಾಸ್ಕೊ: ಬಾಹ್ಯಾಕಾಶದಲ್ಲಿ ಚಿತ್ರೀಕರಿಸಿದ ಮೊದಲ ಚಲನಚಿತ್ರವು ಗುರುವಾರ ರಷ್ಯಾದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಂಡಿತು. ಪಾಶ್ಚಿಮಾತ್ಯರೊಂದಿಗಿನ ತಿಕ್ಕಾಟದ ನಡುವೆ ಪ್ರತಿಸ್ಪರ್ಧಿ ಹಾಲಿವುಡ್ ಯೋಜನೆಗೂ ಮುನ್ನವೇ ಚಿತ್ರ ತೆರೆಗೆ ತರುವಲ್ಲಿ ರಷ್ಯಾ ಯಶಸ್ವಿಯಾಗಿದೆ.

ಗಾಯಗೊಂಡ ಗಗನಯಾತ್ರಿಯನ್ನು ರಕ್ಷಿಸಲು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ವೈದ್ಯರನ್ನು ಕಳುಹಿಸುವ ಕಥಾಹಂದರವನ್ನು ಚಿತ್ರ ‘ದಿ ಚಾಲೆಂಜ್’ ಒಳಗೊಂಡಿದೆ.

ಐಎಸ್‌ಎಸ್‌ನ ಕಕ್ಷೆಯ ಪ್ರಯೋಗಾಲಯದಲ್ಲಿ ದೃಶ್ಯಗಳನ್ನು ಚಿತ್ರೀಕರಿಸಲು ಅಕ್ಟೋಬರ್ 2021ರಲ್ಲಿ 12 ದಿನಗಳ ಅವಧಿಗೆ ನಟಿ ಮತ್ತು ಚಲನಚಿತ್ರ ನಿರ್ದೇಶಕರನ್ನು ರಷ್ಯಾ ಬಾಹ್ಯಾಕಾಶಕ್ಕೆ ಕಳುಹಿಸಿತ್ತು.

2020ರಲ್ಲಿ ಮಿಷನ್ ಇಂಪಾಸಿಬಲ್ ಸ್ಟಾರ್ ಟಾಮ್ ಕ್ರೂಸ್ ಅವರು ನಾಸಾ ಮತ್ತು ಎಲಾನ್ ಮಸ್ಕ್ ಅವರ ಸ್ಪೇಸ್‌ಎಕ್ಸ್‌ನೊಂದಿಗೆ ಘೋಷಿಸಿದ ಹಾಲಿವುಡ್ ಸಿನಿಮಾಗೂ ಮುನ್ನವೇ ರಷ್ಯಾ ಸಿನಿಮಾ ತೆರೆಗೆ ಬರುವ ಮೂಲಕ ಹೊಸ ದಾಖಲೆ ಬರೆದಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಚಲನಚಿತ್ರವನ್ನು ಶ್ಲಾಘಿಸಿದ್ದಾರೆ: ‘ನಾವು ಬಾಹ್ಯಾಕಾಶದ ಕಕ್ಷೆಯಲ್ಲಿ ಚಲನಚಿತ್ರವನ್ನು ಚಿತ್ರೀಕರಿಸಿದ ಮೊದಲಿಗರು. ಮತ್ತೊಮ್ಮೆ ನಾವು ಮೊದಲಿಗರು’ ಎಂದು ಹೇಳಿದ್ದಾರೆ.

ದಿ ಚಾಲೆಂಜ್‌ನಲ್ಲಿ ರಷ್ಯಾದ ಅತ್ಯಂತ ಮನಮೋಹಕ ನಟಿಯರಲ್ಲಿ ಒಬ್ಬರಾದ 38 ವರ್ಷದ ಯುಲಿಯಾ ಪೆರೆಸಿಲ್ಡ್ ವೈದ್ಯೆ ಪಾತ್ರ ನಿರ್ವಹಿಸಿದ್ದಾರೆ.

ಕ್ಯಾಮೆರಾ, ಲೈಟಿಂಗ್ ಮತ್ತು ಸೌಂಡ್ ಉಸ್ತುವಾರಿ ವಹಿಸಿದ್ದ ನಿರ್ದೇಶಕ ಕ್ಲಿಮ್ ಶಿಪೆಂಕೊ, 30 ಗಂಟೆಗಳ ಚಿತ್ರೀಕರಣದ ಫೊಟೇಜ್ ತಂದಿದ್ದರು. ಅದರಲ್ಲಿ 50 ನಿಮಿಷಗಳ ದೃಶ್ಯವನ್ನು ಚಿತ್ರದಲ್ಲಿ ತೋರಿಸಲಾಗಿದೆ.

ಪೆರೆಸಿಲ್ಡ್ ಮತ್ತು ಶಿಪೆಂಕೊ ಅವರು ಗಗನಯಾತ್ರಿಯೊಂದಿಗೆ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಹೋಗುವ ಮೊದಲು ನಾಲ್ಕು ತಿಂಗಳ ಕಾಲ ತರಬೇತಿ ಪಡೆದಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago