ನವದೆಹಲಿ : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್ನಲ್ಲಿ ತಿಳಿಸಲಾಗಿದೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್ನಿಂದ ಏರ್ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…