BREAKING NEWS

ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

ನವದೆಹಲಿ : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್‌ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.

lokesh

Recent Posts

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

1 min ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

1 hour ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

3 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

4 hours ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

7 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

7 hours ago