ನವದೆಹಲಿ : ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್ನಲ್ಲಿ ತಿಳಿಸಲಾಗಿದೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್ನಿಂದ ಏರ್ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…