BREAKING NEWS

ಇನ್ನೂ ಹೆಚ್ಚಲಿದೆ ಬಿಸಿಲಿನ ಧಗೆ ಮುಂದಿನ 5 ದಿನಗಳಲ್ಲಿ ತಾಪಮಾನ 4 ಡಿಗ್ರಿಸೆಲ್ಸಿಯಸ್‌ ಏರಿಕೆ – ಹವಾಮಾನ ಇಲಾಖೆ

ಹೊಸದಿಲ್ಲಿ : ದೇಶದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿರುವ ಹೊತ್ತಲ್ಲೇ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ಹೊರ ಹಾಕಿದೆ.
ವಾಯವ್ಯ, ಪಶ್ಚಿಮ, ಪೂರ್ವ ಮತ್ತು ಕೇಂದ್ರ ಭಾರತ ಭಾಗದಲ್ಲಿ ತಾಪಮಾನ ಸುಮಾರು 4 ಡಿ.ಸೆ.ನಷ್ಟು ಏರಿಕೆಯಾಗಲಿದೆ. ಆದರೆ, ಐದು ದಿನಗಳಲ್ಲಿ ಯಾವುದೇ ಉಷ್ಣ ಮಾರುತದ ಸಾಧ್ಯತೆ ಇಲ್ಲಎಂದು ಶನಿವಾರ ಹೊರಡಿಸಿದ ಮಾರ್ಗಸೂಚಿಯಲ್ಲಿಇಲಾಖೆ ಹೇಳಿದೆ. ಬಿಹಾರ, ಜಾರ್ಖಂಡ್‌, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಗುಜರಾತ್‌, ಪಂಜಾಬ್‌, ಮಹಾರಾಷ್ಟ್ರ, ಹರಿಯಾಣ, ಛತ್ತೀಸ್‌ಗಢದಲ್ಲಿಉಷ್ಣದ ತೀವ್ರತೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಹಾ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಹೇಳಿದ್ದಾರೆ.

ತಾಪಮಾನ 4 ಡಿಗ್ರಿ ಹೆಚ್ಚಳ : ದೇಶದ ಹಲವು ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ. ಇದೇ ವೇಳೆ ದೇಶದ ಕೆಲವು ಭಾಗಗಳಲ್ಲಿ ಭಾರೀ ಬಿರುಗಾಳಿ, ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ ಎಂದಿದ್ದಾರೆ.

ದಕ್ಷಿಣ ಕರ್ನಾಟಕದಲ್ಲಿ 35 ಡಿಗ್ರಿವರೆಗೂ ಹೆಚ್ಚಳ : ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯ ಉಷ್ಣಾಂಶ ದಿನದಿಂದ ದಿನಕ್ಕೆ ಏರುತ್ತಲೆ ಸಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯವಾಗಿ 28ರಿಂದ 30 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುತ್ತಿತ್ತು. ಆದರೆ, ಈ ಬಾರಿ ಉಷ್ಣಾಂಶ 35 ಡಿಗ್ರಿ ವರೆಗೂ ಏರಿಕೆಯಾಗುತ್ತಿದೆ. ಉತ್ತರ ಕರ್ನಾಟಕದ ಹಲವೆಡೆ ಈಗಾಗಲೇ ಉಷ್ಣಾಂಶ 38-39 ಡಿಗ್ರಿ ಸಮೀಪಿಸುತ್ತಿದೆ. ಇನ್ನು ಬೆಳಗ್ಗೆ 9 ಗಂಟೆ ವೇಳೆಗಾಗಲೇ ಬಿಸಲು ಮೈ ಸುಡುತ್ತದೆ. ಇನ್ನು ಮಧ್ಯಾಹ್ನ ಧಗೆ ತಾಳಲಾದರೆ ಜನರು ಕಂಗಾಲಾಗಿದ್ದಾರೆ. ತಂಪು ಪಾಲಿಯ, ಪ್ಯಾನ್‌ ಎಸಿ ಮೊರೆ ಹೋಗಿದ್ದಾರೆ.

ಹಲವೆಡೆ ಗುಡುಗು ಸಹಿತ ಮಳೆ : ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರದಲ್ಲಿ ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮಳೆಯ ಬಳಿಕ ಉಷ್ಣಾಂಶ ನಿಧಾನವಾಗಿ ಏರಿಕೆ ಕಾಣಲಿದೆ. ಜಾಗತಿಕವಾಗಿ ಬದಲಾಗಿರುವ ಹವಾಮಾನ ವೈಪರೀತ್ಯದಿಂದ ದೇಶದಲ್ಲಿಉಷ್ಣಾಂಶ ಏರಿಕೆ ಕಾಣುತ್ತಿದೆ. ದೇಶದಲ್ಲಿಪ್ರವಾಹ, ಬರಗಾಲದಂಥ ಸನ್ನಿವೇಶಗಳು ಸೃಷ್ಟಿಯಾಗುತ್ತಿವೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಳೆ ಮೂರು ದಿನ ಮಳೆ : ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾನುವಾರದಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್‌ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿಒಣ ಹವೆ ಮುಂದುವರಿಯುವುದು ಎಂದು ಇಲಾಖೆ ತಿಳಿಸಿದೆ.

lokesh

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

19 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

22 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

22 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

22 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

22 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

22 hours ago