ನವದೆಹಲಿ : ಹದಿಮೂರು ಮಂದಿ ಶಾಲಾ ಮಕ್ಕಳು ಸೇರಿದಂತೆ 18 ಜನರನ್ನು ಬಲಿ ಪಡೆದ ಅಸ್ಸಾಂನ ಧೇಮಜಿ ಎಂಬಲ್ಲಿ 2004ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳನ್ನು ಇಂದು ಗುವಹಾಟಿ ಹೈಕೋರ್ಟ್ ಖುಲಾಸೆಗೊಳಿಸಿದೆ.
2004ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ನಡೆದ ಈ ಸ್ಫೋಟ ಪ್ರಕರಣದಲ್ಲಿ ಆರು ಮಂದಿಯನ್ನು 2019ರಲ್ಲಿ ದೋಷಿ ಎಂದು ಘೋಷಿಸಲಾಗಿತ್ತು.
ಈ ಬಾಂಬ್ ದಾಳಿಗೆ ಉಲ್ಫಾ (ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾಂ) ಹೊಣೆ ಹೊತ್ತುಕೊಂಡಿತ್ತು. ಈ ದಾಳಿಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದೀಗ ಅಪರಾಧಿಗಳನ್ನು ಖುಲಾಸೆಗೊಳಿಸಿರುವುದು ಸಂತ್ರಸ್ತರ ಕುಟುಂಬಗಳಲ್ಲಿ ಆಕ್ರೋಶ ಮೂಡಿಸಿದೆ.
2019ರಲ್ಲಿ ಧೇಮಜಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಸ್ಫೋಟ ಪ್ರಕರಣ ಸಂಬಂಧ ಲೀಲಾ ಗೊಗೊಯಿ, ದೀಪಾಂಜಲಿ ಬುರಗೊಹೈನ್, ಮುಹಿ ಹಂಡೀಖ್ ಮತ್ತು ಜತಿನ್ ದುಬೋರಿ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೆ ಇನ್ನಿಬ್ಬರಾದ ಪ್ರಶಾಂತ ಭುಯಾನ್ ಮತ್ತು ಹೆಮೆನ್ ಗೊಗೊಯಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಆದರೆ ಅವರೆಲ್ಲರೂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಿದ್ದರು. ಬೆನಿಫಿಟ್ ಆಫ್ ಡೌಟ್ ಆಧಾರದ ಮೇಲೆ ಆರೂ ಜನರನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಅವರು ಶಾಮೀಲಾಗಿಲ್ಲ ಎಂದು ನ್ಯಾಯಾಲಯ ಹೇಳದೇ ಇದ್ದರೂ ಯಾವುದೇ ಸಂಶಯಕ್ಕೆ ಎಡೆಕೊಡದ ರೀತಿಯಲ್ಲಿ ಅಪರಾಧವನ್ನು ಸಾಬೀತುಪಡಿಸಬೇಕಿದೆ. ಆದರೆ ಪ್ರಾಸಿಕ್ಯೂಶನ್ ಅದನ್ನು ಮಾಡಿಲ್ಲ,” ಎಂದು ಆರೋಪಿಗಳ ಪರ ವಕೀಲ ಅಭಿಜಿತ್ ಖನಿಕರ್ ಹೇಳಿದ್ದಾರೆ.
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…