ನವದೆಹಲಿ : ಹದಿಮೂರು ಮಂದಿ ಶಾಲಾ ಮಕ್ಕಳು ಸೇರಿದಂತೆ 18 ಜನರನ್ನು ಬಲಿ ಪಡೆದ ಅಸ್ಸಾಂನ ಧೇಮಜಿ ಎಂಬಲ್ಲಿ 2004ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳನ್ನು ಇಂದು ಗುವಹಾಟಿ ಹೈಕೋರ್ಟ್ ಖುಲಾಸೆಗೊಳಿಸಿದೆ.
2004ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ನಡೆದ ಈ ಸ್ಫೋಟ ಪ್ರಕರಣದಲ್ಲಿ ಆರು ಮಂದಿಯನ್ನು 2019ರಲ್ಲಿ ದೋಷಿ ಎಂದು ಘೋಷಿಸಲಾಗಿತ್ತು.
ಈ ಬಾಂಬ್ ದಾಳಿಗೆ ಉಲ್ಫಾ (ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾಂ) ಹೊಣೆ ಹೊತ್ತುಕೊಂಡಿತ್ತು. ಈ ದಾಳಿಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದೀಗ ಅಪರಾಧಿಗಳನ್ನು ಖುಲಾಸೆಗೊಳಿಸಿರುವುದು ಸಂತ್ರಸ್ತರ ಕುಟುಂಬಗಳಲ್ಲಿ ಆಕ್ರೋಶ ಮೂಡಿಸಿದೆ.
2019ರಲ್ಲಿ ಧೇಮಜಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಸ್ಫೋಟ ಪ್ರಕರಣ ಸಂಬಂಧ ಲೀಲಾ ಗೊಗೊಯಿ, ದೀಪಾಂಜಲಿ ಬುರಗೊಹೈನ್, ಮುಹಿ ಹಂಡೀಖ್ ಮತ್ತು ಜತಿನ್ ದುಬೋರಿ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೆ ಇನ್ನಿಬ್ಬರಾದ ಪ್ರಶಾಂತ ಭುಯಾನ್ ಮತ್ತು ಹೆಮೆನ್ ಗೊಗೊಯಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಆದರೆ ಅವರೆಲ್ಲರೂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಿದ್ದರು. ಬೆನಿಫಿಟ್ ಆಫ್ ಡೌಟ್ ಆಧಾರದ ಮೇಲೆ ಆರೂ ಜನರನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಅವರು ಶಾಮೀಲಾಗಿಲ್ಲ ಎಂದು ನ್ಯಾಯಾಲಯ ಹೇಳದೇ ಇದ್ದರೂ ಯಾವುದೇ ಸಂಶಯಕ್ಕೆ ಎಡೆಕೊಡದ ರೀತಿಯಲ್ಲಿ ಅಪರಾಧವನ್ನು ಸಾಬೀತುಪಡಿಸಬೇಕಿದೆ. ಆದರೆ ಪ್ರಾಸಿಕ್ಯೂಶನ್ ಅದನ್ನು ಮಾಡಿಲ್ಲ,” ಎಂದು ಆರೋಪಿಗಳ ಪರ ವಕೀಲ ಅಭಿಜಿತ್ ಖನಿಕರ್ ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…