BREAKING NEWS

ಅಸ್ಸಾಂ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿಗಳನ್ನು ಖುಲಾಸೆಗೊಳಿಸಿದ ಹೈಕೋರ್ಟ್‌

ನವದೆಹಲಿ : ಹದಿಮೂರು ಮಂದಿ ಶಾಲಾ ಮಕ್ಕಳು ಸೇರಿದಂತೆ 18 ಜನರನ್ನು ಬಲಿ ಪಡೆದ ಅಸ್ಸಾಂನ ಧೇಮಜಿ ಎಂಬಲ್ಲಿ 2004ರಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳನ್ನು ಇಂದು ಗುವಹಾಟಿ ಹೈಕೋರ್ಟ್‌ ಖುಲಾಸೆಗೊಳಿಸಿದೆ.

2004ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ನಡೆದ ಈ ಸ್ಫೋಟ ಪ್ರಕರಣದಲ್ಲಿ ಆರು ಮಂದಿಯನ್ನು 2019ರಲ್ಲಿ ದೋಷಿ ಎಂದು ಘೋಷಿಸಲಾಗಿತ್ತು.

ಈ ಬಾಂಬ್‌ ದಾಳಿಗೆ ಉಲ್ಫಾ (ಯುನೈಟೆಡ್‌ ಲಿಬರೇಷನ್‌ ಫ್ರಂಟ್‌ ಆಫ್‌ ಅಸ್ಸಾಂ) ಹೊಣೆ ಹೊತ್ತುಕೊಂಡಿತ್ತು. ಈ ದಾಳಿಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದೀಗ ಅಪರಾಧಿಗಳನ್ನು ಖುಲಾಸೆಗೊಳಿಸಿರುವುದು ಸಂತ್ರಸ್ತರ ಕುಟುಂಬಗಳಲ್ಲಿ ಆಕ್ರೋಶ ಮೂಡಿಸಿದೆ.

2019ರಲ್ಲಿ ಧೇಮಜಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಈ ಸ್ಫೋಟ ಪ್ರಕರಣ ಸಂಬಂಧ ಲೀಲಾ ಗೊಗೊಯಿ, ದೀಪಾಂಜಲಿ ಬುರಗೊಹೈನ್‌, ಮುಹಿ ಹಂಡೀಖ್‌ ಮತ್ತು ಜತಿನ್‌ ದುಬೋರಿ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೆ ಇನ್ನಿಬ್ಬರಾದ ಪ್ರಶಾಂತ ಭುಯಾನ್‌ ಮತ್ತು ಹೆಮೆನ್‌ ಗೊಗೊಯಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಆದರೆ ಅವರೆಲ್ಲರೂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್‌ ಕದ ತಟ್ಟಿದ್ದರು. ಬೆನಿಫಿಟ್‌ ಆಫ್‌ ಡೌಟ್‌ ಆಧಾರದ ಮೇಲೆ ಆರೂ ಜನರನ್ನು ಹೈಕೋರ್ಟ್‌ ಖುಲಾಸೆಗೊಳಿಸಿದೆ. ಅವರು ಶಾಮೀಲಾಗಿಲ್ಲ ಎಂದು ನ್ಯಾಯಾಲಯ ಹೇಳದೇ ಇದ್ದರೂ ಯಾವುದೇ ಸಂಶಯಕ್ಕೆ ಎಡೆಕೊಡದ ರೀತಿಯಲ್ಲಿ ಅಪರಾಧವನ್ನು ಸಾಬೀತುಪಡಿಸಬೇಕಿದೆ. ಆದರೆ ಪ್ರಾಸಿಕ್ಯೂಶನ್‌ ಅದನ್ನು ಮಾಡಿಲ್ಲ,” ಎಂದು ಆರೋಪಿಗಳ ಪರ ವಕೀಲ ಅಭಿಜಿತ್‌ ಖನಿಕರ್‌ ಹೇಳಿದ್ದಾರೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

13 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

14 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago