ನವದೆಹಲಿ : ಹದಿಮೂರು ಮಂದಿ ಶಾಲಾ ಮಕ್ಕಳು ಸೇರಿದಂತೆ 18 ಜನರನ್ನು ಬಲಿ ಪಡೆದ ಅಸ್ಸಾಂನ ಧೇಮಜಿ ಎಂಬಲ್ಲಿ 2004ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳನ್ನು ಇಂದು ಗುವಹಾಟಿ ಹೈಕೋರ್ಟ್ ಖುಲಾಸೆಗೊಳಿಸಿದೆ.
2004ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ನಡೆದ ಈ ಸ್ಫೋಟ ಪ್ರಕರಣದಲ್ಲಿ ಆರು ಮಂದಿಯನ್ನು 2019ರಲ್ಲಿ ದೋಷಿ ಎಂದು ಘೋಷಿಸಲಾಗಿತ್ತು.
ಈ ಬಾಂಬ್ ದಾಳಿಗೆ ಉಲ್ಫಾ (ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸ್ಸಾಂ) ಹೊಣೆ ಹೊತ್ತುಕೊಂಡಿತ್ತು. ಈ ದಾಳಿಯಲ್ಲಿ 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದೀಗ ಅಪರಾಧಿಗಳನ್ನು ಖುಲಾಸೆಗೊಳಿಸಿರುವುದು ಸಂತ್ರಸ್ತರ ಕುಟುಂಬಗಳಲ್ಲಿ ಆಕ್ರೋಶ ಮೂಡಿಸಿದೆ.
2019ರಲ್ಲಿ ಧೇಮಜಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಈ ಸ್ಫೋಟ ಪ್ರಕರಣ ಸಂಬಂಧ ಲೀಲಾ ಗೊಗೊಯಿ, ದೀಪಾಂಜಲಿ ಬುರಗೊಹೈನ್, ಮುಹಿ ಹಂಡೀಖ್ ಮತ್ತು ಜತಿನ್ ದುಬೋರಿ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದರೆ ಇನ್ನಿಬ್ಬರಾದ ಪ್ರಶಾಂತ ಭುಯಾನ್ ಮತ್ತು ಹೆಮೆನ್ ಗೊಗೊಯಿ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಆದರೆ ಅವರೆಲ್ಲರೂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಕದ ತಟ್ಟಿದ್ದರು. ಬೆನಿಫಿಟ್ ಆಫ್ ಡೌಟ್ ಆಧಾರದ ಮೇಲೆ ಆರೂ ಜನರನ್ನು ಹೈಕೋರ್ಟ್ ಖುಲಾಸೆಗೊಳಿಸಿದೆ. ಅವರು ಶಾಮೀಲಾಗಿಲ್ಲ ಎಂದು ನ್ಯಾಯಾಲಯ ಹೇಳದೇ ಇದ್ದರೂ ಯಾವುದೇ ಸಂಶಯಕ್ಕೆ ಎಡೆಕೊಡದ ರೀತಿಯಲ್ಲಿ ಅಪರಾಧವನ್ನು ಸಾಬೀತುಪಡಿಸಬೇಕಿದೆ. ಆದರೆ ಪ್ರಾಸಿಕ್ಯೂಶನ್ ಅದನ್ನು ಮಾಡಿಲ್ಲ,” ಎಂದು ಆರೋಪಿಗಳ ಪರ ವಕೀಲ ಅಭಿಜಿತ್ ಖನಿಕರ್ ಹೇಳಿದ್ದಾರೆ.
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…
ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…