BREAKING NEWS

ರಾಮಲಲ್ಲಾ ಫೋಟೊ ನಿಜವಾದುದ್ದಲ್ಲ, ಈ ಬಗ್ಗೆ ತನಿಖೆಯಾಗಬೇಕು: ಪ್ರಧಾನ ಅರ್ಚಕ

ನಿನ್ನೆ ( ಜನವರಿ 19 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿ ತಲುಪಿರುವ ಬಾಲರಾಮನ ಫೋಟೊ ಲೀಕ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮೊದಲಿಗೆ ಬಟ್ಟೆ ಇಂದ ಸುತ್ತಲ್ಪಟ್ಟ ವಿಗ್ರಹ, ಬಳಿಕ ಕಣ್ಣಿಗೆ ಮಾತ್ರ ಬಟ್ಟೆ ಕಟ್ಟಿದ ಬಾಲರಾಮನ ವಿಗ್ರಹದ ಫೋಟೊ ವೈರಲ್‌ ಆಗಿತ್ತು. ನಂತರ ಸಂಪೂರ್ಣ ಬಾಲರಾಮನ ಫೋಟೊ ಹರಿದಾಡಿತ್ತು.

ಈ ಫೋಟೊ ಕುರಿತು ಇದೀಗ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಮಾತನಾಡಿದ್ದು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೊ ನಿಜವಾದುದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಎಎನ್‌ಐ ಜತೆ ಮಾತನಾಡಿದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ “ಪ್ರಾಣ ಪ್ರತಿಷ್ಠೆ ಮುಗಿಯುವ ಮುನ್ನ ಬಾಲರಾಮ ಮೂರ್ತಿಯ ಕಣ್ಣುಗಳಿಗೆ ಕಟ್ಟಿರುವ ಬಟ್ಟೆಯನ್ನು ತೆಗೆಯುವ ಹಾಗಿಲ್ಲ. ಕಣ್ಣಿಗೆ ಬಟ್ಟೆ ಕಟ್ಟದೇ ಇರುವ ವಿಗ್ರಹ ನಿಜವಾದುದ್ದಲ್ಲ. ಹಾಗೇನಾದರೂ ಕಣ್ಣುಗಳು ಕಂಡಿದ್ದರೆ, ಈ ಫೋಟೊವನ್ನು ಹರಿಬಿಟ್ಟಿದ್ದು ಯಾರು, ವೈರಲ್‌ ಮಾಡಿದ್ದು ಯಾರು ಎಂಬುದರ ಕುರಿತು ತನಿಖೆ ಆಗಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಇನ್ನು ಈ ಫೋಟೊವನ್ನು ವಿವಿಧ ಕ್ಷೇತ್ರಗಳ ಪ್ರಮುಖರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಎಲ್ಲೆಡೆ ವೈರಲ್‌ ಆಗಿದೆ. ಕಣ್ಣಿಗೆ ಬಟ್ಟೆ ಇಲ್ಲದೇ ಇರುವ ವಿಗ್ರಹದ ಫೋಟೊವನ್ನು ಮಂದಿರಕ್ಕೆ ಸ್ಥಳಾಂತರಿಸುವ ಮುನ್ನವೇ ಕ್ಲಿಕ್ಕಿಸಿರಬಹುದು ಎಂಬ ಸಂದೇಹವೂ ಸಹ ಇದೆ.

andolana

Recent Posts

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…

5 mins ago

ಓದುಗರ ಪತ್ರ: ಬಸ್ ವ್ಯವಸ್ಥೆ ಕಲ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…

8 mins ago

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯಕ್ಕೆ ಕೃಪಾಂಕ ನೀಡಿ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…

10 mins ago

ಪಿಎನ್‌ಜಿ ಗ್ರಾಹಕರ ಎಲ್‌ಪಿಜಿ ಸಿಲಿಂಡರ್ ಮೇಲೆ ‘ಕೇಂದ್ರ’ ಕಣ್ಣು?

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…

1 hour ago

ಮೈಸೂರು ಜನತೆಗೆ ನೀರಿನ ಕರ ಏರಿಕೆಯ ಬರೆ

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…

1 hour ago