ನಿನ್ನೆ ( ಜನವರಿ 19 ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿ ತಲುಪಿರುವ ಬಾಲರಾಮನ ಫೋಟೊ ಲೀಕ್ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮೊದಲಿಗೆ ಬಟ್ಟೆ ಇಂದ ಸುತ್ತಲ್ಪಟ್ಟ ವಿಗ್ರಹ, ಬಳಿಕ ಕಣ್ಣಿಗೆ ಮಾತ್ರ ಬಟ್ಟೆ ಕಟ್ಟಿದ ಬಾಲರಾಮನ ವಿಗ್ರಹದ ಫೋಟೊ ವೈರಲ್ ಆಗಿತ್ತು. ನಂತರ ಸಂಪೂರ್ಣ ಬಾಲರಾಮನ ಫೋಟೊ ಹರಿದಾಡಿತ್ತು.
ಈ ಫೋಟೊ ಕುರಿತು ಇದೀಗ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಮಾತನಾಡಿದ್ದು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಫೋಟೊ ನಿಜವಾದುದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಎಎನ್ಐ ಜತೆ ಮಾತನಾಡಿದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ “ಪ್ರಾಣ ಪ್ರತಿಷ್ಠೆ ಮುಗಿಯುವ ಮುನ್ನ ಬಾಲರಾಮ ಮೂರ್ತಿಯ ಕಣ್ಣುಗಳಿಗೆ ಕಟ್ಟಿರುವ ಬಟ್ಟೆಯನ್ನು ತೆಗೆಯುವ ಹಾಗಿಲ್ಲ. ಕಣ್ಣಿಗೆ ಬಟ್ಟೆ ಕಟ್ಟದೇ ಇರುವ ವಿಗ್ರಹ ನಿಜವಾದುದ್ದಲ್ಲ. ಹಾಗೇನಾದರೂ ಕಣ್ಣುಗಳು ಕಂಡಿದ್ದರೆ, ಈ ಫೋಟೊವನ್ನು ಹರಿಬಿಟ್ಟಿದ್ದು ಯಾರು, ವೈರಲ್ ಮಾಡಿದ್ದು ಯಾರು ಎಂಬುದರ ಕುರಿತು ತನಿಖೆ ಆಗಬೇಕು” ಎಂದು ಹೇಳಿಕೆ ನೀಡಿದ್ದಾರೆ.
ಇನ್ನು ಈ ಫೋಟೊವನ್ನು ವಿವಿಧ ಕ್ಷೇತ್ರಗಳ ಪ್ರಮುಖರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಎಲ್ಲೆಡೆ ವೈರಲ್ ಆಗಿದೆ. ಕಣ್ಣಿಗೆ ಬಟ್ಟೆ ಇಲ್ಲದೇ ಇರುವ ವಿಗ್ರಹದ ಫೋಟೊವನ್ನು ಮಂದಿರಕ್ಕೆ ಸ್ಥಳಾಂತರಿಸುವ ಮುನ್ನವೇ ಕ್ಲಿಕ್ಕಿಸಿರಬಹುದು ಎಂಬ ಸಂದೇಹವೂ ಸಹ ಇದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…