BREAKING NEWS

ತಿರುಮಲದಲ್ಲಿ ಬಾಲಕಿಯನ್ನು ಕೊಂದಿದ್ದ ಚಿರತೆ ಸೆರೆ

ತಿರುಪತಿ : ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದ ಆರು ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

ಇದೇ ಆಗಸ್ಟ್ 12ರ ಶುಕ್ರವಾರ ರಾತ್ರಿ 7.30ರಿಂದ 8ರ ವೇಳೆ ಲಕ್ಷಿತಾ (6) ಎಂಬ ನೆಲ್ಲೂರು ಮೂಲದ ಬಾಲಕಿ ತನ್ನ ಪೋಷಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆಂದು ಬಂದಿದ್ದಳು. ತಿರುಮಲಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದರು. ಲಕ್ಷಿತಾ ಪೋಷಕರಿಗಿಂತ ಮುಂದೆ ನಡೆಯುತ್ತ ಸಾಗಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಬಾಲಕಿ ಕಣ್ಮರೆಯಾದ ಕಾರಣ ಆತಂಕಕ್ಕೊಳಗಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು.

ಕೊನೆಗೆ ಟಿಟಿಡಿ ಜಾಗೃತ ದಳ ಮತ್ತು ಭದ್ರತಾ ಸಿಬಂದಿ, ಸ್ಥಳೀಯ ಪೊಲೀಸರು, ಅರಣ್ಯ ಇಲಾಖೆ ಸಿಬಂದಿ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದು, ಬೆಳಗಿನ ಜಾವ 4 ಗಂಟೆಗೆ ನರಸಿಂಹ ಸ್ವಾಮಿ ದೇಗುಲದ ಸಮೀಪದಲ್ಲಿ ಮೃತದೇಹ ಪತ್ತೆಯಾಗಿದೆ. ದೇಹದಲ್ಲಿ ಪ್ರಾಣಿ ದಾಳಿಯ ಗಾಯದ ಗುರುತುಗಳು ಕಂಡುಬಂದಿವೆ. ಈ ಘಟನೆ ಬೆನ್ನಲ್ಲೇ ಕಾರ್ಯಾಚರಣೆ ಆರಂಭಿಸಿದ್ದ ಟಿಟಿಡಿ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಇಂದು ಬಾಲಕಿಯನ್ನು ಕೊಂದಿದ್ದ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಚಿರತೆ ಸೆರೆ ಹಿಡಿಯಲು ಟಿಟಿಡಿ ಅಧಿಕಾರಿಗಳು ಅಲಿಪಿರಿ ನಡಿಗೆ ಮಾರ್ಗದಲ್ಲಿ ಬೋನುಗಳನ್ನು ಇರಿಸಿದ್ದರು. ಕಳೆದ ರಾತ್ರಿ ಈ ಮಾರ್ಗದಲ್ಲಿ ಸಂಚರಿಸಿದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಎರಡು ದಿನಗಳಲ್ಲಿ ಐದು ಪ್ರದೇಶಗಳಲ್ಲಿ ಚಿರತೆ ಸಂಚರಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಮಲ ಬಾವಿ ಹತ್ತಿರದ ಪಬ್ಲಿಕ್ ವ್ಯೂ ಪಾಯಿಂಟ್ ಬಳಿ ಚಿರತೆ ಬೋನಿಗೆ ಬಿದ್ದಿದೆ. ಎಂದು ಟಿಟಿಡಿ ಇಒ ಧರ್ಮಾರೆಡ್ಡಿ ಹೇಳಿದ್ದಾರೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago