ತಿರುಪತಿ : ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ಪ್ರಸಿದ್ಧ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದ ಆರು ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.
ಇದೇ ಆಗಸ್ಟ್ 12ರ ಶುಕ್ರವಾರ ರಾತ್ರಿ 7.30ರಿಂದ 8ರ ವೇಳೆ ಲಕ್ಷಿತಾ (6) ಎಂಬ ನೆಲ್ಲೂರು ಮೂಲದ ಬಾಲಕಿ ತನ್ನ ಪೋಷಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆಂದು ಬಂದಿದ್ದಳು. ತಿರುಮಲಕ್ಕೆ ಕಾಲ್ನಡಿಗೆ ಮೂಲಕ ಹೊರಟಿದ್ದರು. ಲಕ್ಷಿತಾ ಪೋಷಕರಿಗಿಂತ ಮುಂದೆ ನಡೆಯುತ್ತ ಸಾಗಿದ್ದಳು. ಸ್ವಲ್ಪ ಹೊತ್ತಿನ ಬಳಿಕ ಬಾಲಕಿ ಕಣ್ಮರೆಯಾದ ಕಾರಣ ಆತಂಕಕ್ಕೊಳಗಾದ ಪೋಷಕರು ಹುಡುಕಾಟ ಆರಂಭಿಸಿದ್ದರು. ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು.
ಕೊನೆಗೆ ಟಿಟಿಡಿ ಜಾಗೃತ ದಳ ಮತ್ತು ಭದ್ರತಾ ಸಿಬಂದಿ, ಸ್ಥಳೀಯ ಪೊಲೀಸರು, ಅರಣ್ಯ ಇಲಾಖೆ ಸಿಬಂದಿ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದು, ಬೆಳಗಿನ ಜಾವ 4 ಗಂಟೆಗೆ ನರಸಿಂಹ ಸ್ವಾಮಿ ದೇಗುಲದ ಸಮೀಪದಲ್ಲಿ ಮೃತದೇಹ ಪತ್ತೆಯಾಗಿದೆ. ದೇಹದಲ್ಲಿ ಪ್ರಾಣಿ ದಾಳಿಯ ಗಾಯದ ಗುರುತುಗಳು ಕಂಡುಬಂದಿವೆ. ಈ ಘಟನೆ ಬೆನ್ನಲ್ಲೇ ಕಾರ್ಯಾಚರಣೆ ಆರಂಭಿಸಿದ್ದ ಟಿಟಿಡಿ ಸಿಬ್ಬಂದಿ ಮತ್ತು ಅರಣ್ಯ ಇಲಾಖೆ ಇಂದು ಬಾಲಕಿಯನ್ನು ಕೊಂದಿದ್ದ ಚಿರತೆಯನ್ನು ಸೆರೆ ಹಿಡಿದಿದ್ದಾರೆ.
ಚಿರತೆ ಸೆರೆ ಹಿಡಿಯಲು ಟಿಟಿಡಿ ಅಧಿಕಾರಿಗಳು ಅಲಿಪಿರಿ ನಡಿಗೆ ಮಾರ್ಗದಲ್ಲಿ ಬೋನುಗಳನ್ನು ಇರಿಸಿದ್ದರು. ಕಳೆದ ರಾತ್ರಿ ಈ ಮಾರ್ಗದಲ್ಲಿ ಸಂಚರಿಸಿದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಎರಡು ದಿನಗಳಲ್ಲಿ ಐದು ಪ್ರದೇಶಗಳಲ್ಲಿ ಚಿರತೆ ಸಂಚರಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಮಲ ಬಾವಿ ಹತ್ತಿರದ ಪಬ್ಲಿಕ್ ವ್ಯೂ ಪಾಯಿಂಟ್ ಬಳಿ ಚಿರತೆ ಬೋನಿಗೆ ಬಿದ್ದಿದೆ. ಎಂದು ಟಿಟಿಡಿ ಇಒ ಧರ್ಮಾರೆಡ್ಡಿ ಹೇಳಿದ್ದಾರೆ. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…