ಹುಬ್ಬಳ್ಳಿ : ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ತಯಾರಿ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ಅಭ್ಯರ್ಥಿಗಳ ವರದಿ ಕೊಟ್ಟಿಲ್ಲ, ಈ ಬಗ್ಗೆ ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದಿದ್ದಾರೆ.
ಕರ್ನಾಟಕಕ್ಕೆ 50ನೇ ವರ್ಷ, ಇಡೀ ವರ್ಷ ಹಬ್ಬದ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇಂದು ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಇಂದು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…