ಹುಬ್ಬಳ್ಳಿ : ಇನ್ನೂ ಮೂರ್ನಾಲ್ಕು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. 75% ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿ ಆಗಿ ಬಂದಿದ್ದಾರೆ. ಅವರೆಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ತಯಾರಿ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ಅಭ್ಯರ್ಥಿಗಳ ವರದಿ ಕೊಟ್ಟಿಲ್ಲ, ಈ ಬಗ್ಗೆ ನಮ್ಮ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದಿದ್ದಾರೆ.
ಕರ್ನಾಟಕಕ್ಕೆ 50ನೇ ವರ್ಷ, ಇಡೀ ವರ್ಷ ಹಬ್ಬದ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ವಿಜಯನಗರ ನಾಡು ಹಂಪಿಯಿಂದ ಜ್ಯೋತಿ ಶುರುವಾಗಿದೆ. ಇದಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಮುಂದಿನ ಭಾಗವಾಗಿ ಇಂದು ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಇಂದು 10 ಜನ ಮಂತ್ರಿಗಳು ಗದಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಈಗಾಗಲೇ ಮುಖ್ಯಮಂತ್ರಿಗಳು ಭುವನೇಶ್ವರಿ ಭವನವನ್ನು ಕಟ್ಟಿಸಲು ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…