ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ.
ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿ.
ಕೇರಳ ಮೂಲದವರಾಗಿರುವ ಈ ಜೋಡಿ ಕಳೆದ ಎರಡು ವರ್ಷಗಳಿಂದ ಲಿವಿಂಗ್ ಟುಗೇದರ್ ನಲ್ಲಿತ್ತು. ಇತ್ತೀಚೆಗೆ ಪ್ರಿಯತಮೆ ದೇವಾ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪ ಮಾಡಲಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು. ಶನಿವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ವೈಷ್ಣವ್ ಅಲ್ಲೇ ಇದ್ದ ಕುಕ್ಕರ್ ನಿಂದ ಯುವತಿಯ ತಲೆಗೆ ಹೊಡೆದಿದ್ದಾನೆ.
ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸದ್ಯ ಮೈಕೋ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…