ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ.
ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) ಹತ್ಯೆ ಮಾಡಿದ ಆರೋಪಿ.
ಕೇರಳ ಮೂಲದವರಾಗಿರುವ ಈ ಜೋಡಿ ಕಳೆದ ಎರಡು ವರ್ಷಗಳಿಂದ ಲಿವಿಂಗ್ ಟುಗೇದರ್ ನಲ್ಲಿತ್ತು. ಇತ್ತೀಚೆಗೆ ಪ್ರಿಯತಮೆ ದೇವಾ ಬೇರೊಬ್ಬ ಯುವಕನ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆ ಎಂದು ಆರೋಪ ಮಾಡಲಾಗಿತ್ತು. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಆಗಾಗ ಜಗಳಗಳು ನಡೆಯುತ್ತಿತ್ತು. ಶನಿವಾರ ರಾತ್ರಿ ಕೂಡ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ವೈಷ್ಣವ್ ಅಲ್ಲೇ ಇದ್ದ ಕುಕ್ಕರ್ ನಿಂದ ಯುವತಿಯ ತಲೆಗೆ ಹೊಡೆದಿದ್ದಾನೆ.
ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಸದ್ಯ ಮೈಕೋ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…