ಬೀದರ್ : ಮರಾಠಾ ಮೀಸಲಾತಿಗಾಗಿ ಮಹಾರಾಷ್ಟ್ರದಲ್ಲಿ ಹೋರಾಟ ತೀವ್ರಗೊಂಡಿದೆ. ಕೆಎಸ್ಆರ್ ಟಿಸಿ ಬಸ್ಗೆ ಬೆಂಕಿಹಚ್ಚಿ ಮರಾಠಾ ಪುಂಡರು ಪುಂಡಾಟ ಮೆರೆದಿದ್ದಾರೆ.
ಮಹಾರಾಷ್ಟ್ರದ ಉಮ್ಮರ್ಗಾದ ತುರುರಿ ಬಳಿ ಬಸ್ ಹೊತ್ತಿ ಉರಿದಿದೆ. ಇದಕ್ಕೂ ಮುನ್ನ ಬಸ್ನ ಗ್ಲಾಸ್ ಹಾಗೂ ಕಿಟಕಿಗಳ ಗಾಜು ಪುಡಿಪುಡಿ ಮಾಡಿದ್ದಾರೆ. ಘಟನೆಯಲ್ಲಿ ಡ್ರೈವರ್, ಕಂಡಕ್ಟರ್ ಸೇರಿ ಬಸ್ನಲ್ಲಿದ್ದ 46 ಮಂದಿ ಪ್ರಯಾಣಿಕರು ಬಚಾವ್ ಆಗಿದ್ದಾರೆ.
ಈ ಬಸ್ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಡಿಪೋಗೆ ಸೇರಿದ್ದಾಗಿದೆ. ಭಾಲ್ಕಿಯಿಂದ ಪುಣೆಗೆ ಹೊರಟಿತ್ತು. ಈ ವೇಳೆ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ. ಇದು ಕನ್ನಡ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮುಂಜಾಗ್ರತಾ ಕ್ರಮವಾಗಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮವು ಮಹಾರಾಷ್ಟ್ರಕ್ಕೆ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ಹೊರಡುವ ಬಸ್ ಸಂಚಾರಗಳೆಲ್ಲವನ್ನು ಬಂದ್ ಮಾಡಲಾಗಿದೆ. ಅಲ್ಲದೇ ಈಗಾಗಲೇ ಮಹಾರಾಷ್ಟ್ರ ವ್ಯಾಪ್ತಿಯೊಳಗಿರುವ ಬಸ್ಗಳು ಸಮೀಪದ ಡಿಪೋ ಇಲ್ಲವೇ ಪೊಲೀಸ್ ಠಾಣೆಯೊಳಗೆ ನಿಲ್ಲಿಸಲು ಕೆ ಎಸ್ ಆರ್ ಟಿಸಿ ಎಂಡಿ ರಾಚಪ್ಪ ಅವರು ತಮ್ಮ ನಿಗಮದ ಬಸ್ ಚಾಲಕ, ನಿರ್ವಾಹಕರಿಗೆ ಸೂಚನೆ ನೀಡಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…