ಚೆನ್ನೈ: ಬ್ರಿಟಿಷರ ಕಾಲದ ಅಪರಾಧ ಕಾನೂನುಗಳಿಗೆ ಪರ್ಯಾಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಶುಕ್ರವಾರ ಮಂಡಿಸಿದ ಮೂರು ಹೊಸ ವಿಧೇಯಕಗಳ ಹಿಂದಿ ಹೆಸರುಗಳನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರೋಧಿಸಿದೆ.
ಸಂಸತ್ನ ಮುಂಗಾರು ಅಧಿವೇಶನ ಅಂತ್ಯಗೊಂಡ ಬಳಿಕ ದಿಲ್ಲಿಯಿಂದ ಮರಳಿದ ಡಿಎಂಕೆ ಸಂಸದ ವಿಲ್ಸನ್, ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. “ಭಾರತವು ಅನೇಕ ವಿಭಿನ್ನ ಭಾಷೆಗಳನ್ನು ಹೊಂದಿರುವುದರಿಂದ ಇಂಗ್ಲಿಷ್ ಸಾಮಾನ್ಯ ಬಳಕೆಯ ಭಾಷೆಯಾಗಿದೆ. ಎಲ್ಲಾ ಮೂರು ವಿಧೇಯಕಗಳು ಹಿಂದಿಯಲ್ಲಿವೆ. ಹೀಗಾಗಿ ಅದು ಯಾವ ಮಸೂದೆ ಎನ್ನುವುದು ಜನರಿಗೆ ಅರ್ಥವಾಗುವುದಿಲ್ಲ. ಈ ಹೆಸರುಗಳನ್ನು ಉಚ್ಛರಿಸುವುದು ಬಹಳ ಕಷ್ಟವಾಗುತ್ತಿದೆ. ಇದು ಭಾರತದಾದ್ಯಂತ ಹಿಂದಿಯನ್ನು ಬಲವಂತವಾಗಿ ತುರುಕುವುದಕ್ಕೆ ಎಡೆಮಾಡಿಕೊಡಲಿದೆ” ಎಂದು ಆರೋಪಿಸಿದರು.
ಈ ನಡೆಯು ಸಂವಿಧಾನ ವಿರೋಧಿ ಎಂದು ವಿಲ್ಸನ್ ಟೀಕಿಸಿದರು. “ಮೂರೂ ಮಸೂದೆಗಳ ಶೀರ್ಷಿಕೆಗಳು ಹಿಂದಿಯಲ್ಲಿವೆ. ಕಾನೂನುಗಳ ಶೀರ್ಷಿಕೆ ಹಿಂದಿಯಲ್ಲಿ ಇರುವುದು ಸಂವಿಧಾನದ ನಿಯಮಕ್ಕೆ ವಿರುದ್ಧವಾಗಿದೆ. ಮಸೂದೆ ಸೇರಿದಂತೆ ಏನೇ ರೂಪಿಸಿದರೂ ಅದು ಇಂಗ್ಲಿಷ್ನಲ್ಲಿ ಇರಬೇಕು ಎಂದು ಸಂವಿಧಾನದಲ್ಲಿ ಹೇಳಲಾಗಿದೆ” ಎಂಬುದಾಗಿ ಹೇಳಿದರು.
ಕೇಂದ್ರ ಸರ್ಕಾರವು ಮಸೂದೆಗಳನ್ನು ಹಿಂದಿಯಲ್ಲಿ ಪ್ರಸ್ತುತಪಡಿಸಿರುವುದು ‘ಭಾಷಾ ಸಾಮ್ರಾಜ್ಯಶಾಹಿ’ ಸರಣಿಯ ಭಾಗವಾಗಿದೆ ಮತ್ತು ಇದು ವಸಾಹತು ವಿಮೋಚನೆಯ ಹೆಸರಿನಲ್ಲಿ ವಸಾಹತು ಮರು ಸ್ಥಾಪನೆಯ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.
“ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಮೊಂಡುತನದ ಪ್ರಯತ್ನವು ಒಟ್ಟಾರೆ ಬದಲಾವಣೆಯ ಮೂಲಕ ಭಾರತೀಯ ವೈವಿಧ್ಯತೆಯ ಸತ್ವವನ್ನು ಹಾಳುಮಾಡುವಂತಿದೆ- ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ವಿಧೇಯಕಗಳು ಭಾಷಾ ಸಾಮ್ರಾಜ್ಯಶಾಹಿಯ ಭಾಗವಾಗಿದೆ. ಇದು ಭಾರತದ ಏಕತೆಯ ಮೂಲ ನೆಲಗಟ್ಟಿಗೆ ವಿರುದ್ಧವಾಗಿದೆ. ಇನ್ನು ಮುಂದೆ ಒಂದೇ ಒಂದು ತಮಿಳು ಪದವನ್ನು ಉಚ್ಚರಿಸುವ ನೈತಿಕ ಹಕ್ಕೂ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ” ಎಂದು ಸ್ಟಾಲಿನ್ ಅವರು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದರು.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…