ಚೆನ್ನೈ: ಬ್ರಿಟಿಷರ ಕಾಲದ ಅಪರಾಧ ಕಾನೂನುಗಳಿಗೆ ಪರ್ಯಾಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಶುಕ್ರವಾರ ಮಂಡಿಸಿದ ಮೂರು ಹೊಸ ವಿಧೇಯಕಗಳ ಹಿಂದಿ ಹೆಸರುಗಳನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರೋಧಿಸಿದೆ.
ಸಂಸತ್ನ ಮುಂಗಾರು ಅಧಿವೇಶನ ಅಂತ್ಯಗೊಂಡ ಬಳಿಕ ದಿಲ್ಲಿಯಿಂದ ಮರಳಿದ ಡಿಎಂಕೆ ಸಂಸದ ವಿಲ್ಸನ್, ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. “ಭಾರತವು ಅನೇಕ ವಿಭಿನ್ನ ಭಾಷೆಗಳನ್ನು ಹೊಂದಿರುವುದರಿಂದ ಇಂಗ್ಲಿಷ್ ಸಾಮಾನ್ಯ ಬಳಕೆಯ ಭಾಷೆಯಾಗಿದೆ. ಎಲ್ಲಾ ಮೂರು ವಿಧೇಯಕಗಳು ಹಿಂದಿಯಲ್ಲಿವೆ. ಹೀಗಾಗಿ ಅದು ಯಾವ ಮಸೂದೆ ಎನ್ನುವುದು ಜನರಿಗೆ ಅರ್ಥವಾಗುವುದಿಲ್ಲ. ಈ ಹೆಸರುಗಳನ್ನು ಉಚ್ಛರಿಸುವುದು ಬಹಳ ಕಷ್ಟವಾಗುತ್ತಿದೆ. ಇದು ಭಾರತದಾದ್ಯಂತ ಹಿಂದಿಯನ್ನು ಬಲವಂತವಾಗಿ ತುರುಕುವುದಕ್ಕೆ ಎಡೆಮಾಡಿಕೊಡಲಿದೆ” ಎಂದು ಆರೋಪಿಸಿದರು.
ಈ ನಡೆಯು ಸಂವಿಧಾನ ವಿರೋಧಿ ಎಂದು ವಿಲ್ಸನ್ ಟೀಕಿಸಿದರು. “ಮೂರೂ ಮಸೂದೆಗಳ ಶೀರ್ಷಿಕೆಗಳು ಹಿಂದಿಯಲ್ಲಿವೆ. ಕಾನೂನುಗಳ ಶೀರ್ಷಿಕೆ ಹಿಂದಿಯಲ್ಲಿ ಇರುವುದು ಸಂವಿಧಾನದ ನಿಯಮಕ್ಕೆ ವಿರುದ್ಧವಾಗಿದೆ. ಮಸೂದೆ ಸೇರಿದಂತೆ ಏನೇ ರೂಪಿಸಿದರೂ ಅದು ಇಂಗ್ಲಿಷ್ನಲ್ಲಿ ಇರಬೇಕು ಎಂದು ಸಂವಿಧಾನದಲ್ಲಿ ಹೇಳಲಾಗಿದೆ” ಎಂಬುದಾಗಿ ಹೇಳಿದರು.
ಕೇಂದ್ರ ಸರ್ಕಾರವು ಮಸೂದೆಗಳನ್ನು ಹಿಂದಿಯಲ್ಲಿ ಪ್ರಸ್ತುತಪಡಿಸಿರುವುದು ‘ಭಾಷಾ ಸಾಮ್ರಾಜ್ಯಶಾಹಿ’ ಸರಣಿಯ ಭಾಗವಾಗಿದೆ ಮತ್ತು ಇದು ವಸಾಹತು ವಿಮೋಚನೆಯ ಹೆಸರಿನಲ್ಲಿ ವಸಾಹತು ಮರು ಸ್ಥಾಪನೆಯ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.
“ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಮೊಂಡುತನದ ಪ್ರಯತ್ನವು ಒಟ್ಟಾರೆ ಬದಲಾವಣೆಯ ಮೂಲಕ ಭಾರತೀಯ ವೈವಿಧ್ಯತೆಯ ಸತ್ವವನ್ನು ಹಾಳುಮಾಡುವಂತಿದೆ- ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ವಿಧೇಯಕಗಳು ಭಾಷಾ ಸಾಮ್ರಾಜ್ಯಶಾಹಿಯ ಭಾಗವಾಗಿದೆ. ಇದು ಭಾರತದ ಏಕತೆಯ ಮೂಲ ನೆಲಗಟ್ಟಿಗೆ ವಿರುದ್ಧವಾಗಿದೆ. ಇನ್ನು ಮುಂದೆ ಒಂದೇ ಒಂದು ತಮಿಳು ಪದವನ್ನು ಉಚ್ಚರಿಸುವ ನೈತಿಕ ಹಕ್ಕೂ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ” ಎಂದು ಸ್ಟಾಲಿನ್ ಅವರು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…
ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…