ಚೆನ್ನೈ: ಬ್ರಿಟಿಷರ ಕಾಲದ ಅಪರಾಧ ಕಾನೂನುಗಳಿಗೆ ಪರ್ಯಾಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ನಲ್ಲಿ ಶುಕ್ರವಾರ ಮಂಡಿಸಿದ ಮೂರು ಹೊಸ ವಿಧೇಯಕಗಳ ಹಿಂದಿ ಹೆಸರುಗಳನ್ನು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ವಿರೋಧಿಸಿದೆ.
ಸಂಸತ್ನ ಮುಂಗಾರು ಅಧಿವೇಶನ ಅಂತ್ಯಗೊಂಡ ಬಳಿಕ ದಿಲ್ಲಿಯಿಂದ ಮರಳಿದ ಡಿಎಂಕೆ ಸಂಸದ ವಿಲ್ಸನ್, ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. “ಭಾರತವು ಅನೇಕ ವಿಭಿನ್ನ ಭಾಷೆಗಳನ್ನು ಹೊಂದಿರುವುದರಿಂದ ಇಂಗ್ಲಿಷ್ ಸಾಮಾನ್ಯ ಬಳಕೆಯ ಭಾಷೆಯಾಗಿದೆ. ಎಲ್ಲಾ ಮೂರು ವಿಧೇಯಕಗಳು ಹಿಂದಿಯಲ್ಲಿವೆ. ಹೀಗಾಗಿ ಅದು ಯಾವ ಮಸೂದೆ ಎನ್ನುವುದು ಜನರಿಗೆ ಅರ್ಥವಾಗುವುದಿಲ್ಲ. ಈ ಹೆಸರುಗಳನ್ನು ಉಚ್ಛರಿಸುವುದು ಬಹಳ ಕಷ್ಟವಾಗುತ್ತಿದೆ. ಇದು ಭಾರತದಾದ್ಯಂತ ಹಿಂದಿಯನ್ನು ಬಲವಂತವಾಗಿ ತುರುಕುವುದಕ್ಕೆ ಎಡೆಮಾಡಿಕೊಡಲಿದೆ” ಎಂದು ಆರೋಪಿಸಿದರು.
ಈ ನಡೆಯು ಸಂವಿಧಾನ ವಿರೋಧಿ ಎಂದು ವಿಲ್ಸನ್ ಟೀಕಿಸಿದರು. “ಮೂರೂ ಮಸೂದೆಗಳ ಶೀರ್ಷಿಕೆಗಳು ಹಿಂದಿಯಲ್ಲಿವೆ. ಕಾನೂನುಗಳ ಶೀರ್ಷಿಕೆ ಹಿಂದಿಯಲ್ಲಿ ಇರುವುದು ಸಂವಿಧಾನದ ನಿಯಮಕ್ಕೆ ವಿರುದ್ಧವಾಗಿದೆ. ಮಸೂದೆ ಸೇರಿದಂತೆ ಏನೇ ರೂಪಿಸಿದರೂ ಅದು ಇಂಗ್ಲಿಷ್ನಲ್ಲಿ ಇರಬೇಕು ಎಂದು ಸಂವಿಧಾನದಲ್ಲಿ ಹೇಳಲಾಗಿದೆ” ಎಂಬುದಾಗಿ ಹೇಳಿದರು.
ಕೇಂದ್ರ ಸರ್ಕಾರವು ಮಸೂದೆಗಳನ್ನು ಹಿಂದಿಯಲ್ಲಿ ಪ್ರಸ್ತುತಪಡಿಸಿರುವುದು ‘ಭಾಷಾ ಸಾಮ್ರಾಜ್ಯಶಾಹಿ’ ಸರಣಿಯ ಭಾಗವಾಗಿದೆ ಮತ್ತು ಇದು ವಸಾಹತು ವಿಮೋಚನೆಯ ಹೆಸರಿನಲ್ಲಿ ವಸಾಹತು ಮರು ಸ್ಥಾಪನೆಯ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದರು.
“ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಮೊಂಡುತನದ ಪ್ರಯತ್ನವು ಒಟ್ಟಾರೆ ಬದಲಾವಣೆಯ ಮೂಲಕ ಭಾರತೀಯ ವೈವಿಧ್ಯತೆಯ ಸತ್ವವನ್ನು ಹಾಳುಮಾಡುವಂತಿದೆ- ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ವಿಧೇಯಕಗಳು ಭಾಷಾ ಸಾಮ್ರಾಜ್ಯಶಾಹಿಯ ಭಾಗವಾಗಿದೆ. ಇದು ಭಾರತದ ಏಕತೆಯ ಮೂಲ ನೆಲಗಟ್ಟಿಗೆ ವಿರುದ್ಧವಾಗಿದೆ. ಇನ್ನು ಮುಂದೆ ಒಂದೇ ಒಂದು ತಮಿಳು ಪದವನ್ನು ಉಚ್ಚರಿಸುವ ನೈತಿಕ ಹಕ್ಕೂ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ” ಎಂದು ಸ್ಟಾಲಿನ್ ಅವರು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದರು.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…