BREAKING NEWS

ಅಭಿ​ವೃದ್ಧಿ ಬಿಟ್ಟು ಹಿಂದೂ ಧರ್ಮ ವಿರೋ​ಧಿ​ಸುವ ಹೊಸ ಸರ್ಕಾ​ರ : ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಹೊಸ ಸರ್ಕಾರದ ಸಚಿವರು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಹೇಳುವುದನ್ನು ಬಿಟ್ಟು ಹಿಂದೂ ಧರ್ಮದ ವಿರುದ್ಧ ಮಾತನಾಡುತ್ತಿದ್ದಾರೆ. ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮೋಸದ ಕಾರ್ಡಿಗೆ ಗೆಲುವಾಗಿದೆಯೇ ಹೊರತು, ಕಾಂಗ್ರೆಸ್‌ ಪಕ್ಷಕ್ಕಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸುವರ್ಣ ಸಹಕಾರಿ ಭವನದಲ್ಲಿ ನಡೆದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವ ಕಾರ್ಯ​ಕ್ರ​ಮ​ದ​ಲ್ಲಿ ಮಾತನಾಡಿದ ಅವರು, 65 ವರ್ಷಗಳಿಂದ ಆ ಪಕ್ಷ ಜನರನ್ನು ವಂಚಿಸುವ ಮೂಲಕ ಆಡಳಿತ ನಡೆಸಿಕೊಂಡು ಬಂದಿದೆ. ಗ್ಯಾರಂಟಿ ಕಾರ್ಡ್‌ನ ಘೋಷಣೆಯಿಂದ ಕಾಂಗ್ರೆಸ್‌ನವರು ಹುಲಿ ಸವಾರಿ ಮಾಡುವಂತಾಗಿದೆ.

ಅವರ ಮುಖದಲ್ಲಿ ಗೆಲುವಿನ ನಗುವೇ ಕಾಣಿಸುತ್ತಿಲ್ಲ. ವಂಚನೆಯ ಗ್ಯಾರಂಟಿ ಕಾರ್ಡ್‌ನಿಂದ ನಮ್ಮ ಪಕ್ಷದ ಸುಮಾರು 50 ಸ್ಥಾನಗಳಿಗೆ ಸೋಲುಂಟಾಗಿದೆ. ಆದರೆ, ಈ ಕ್ಷೇತ್ರದಲ್ಲಿ ಅದರ ಪ್ರಭಾವ ಮತದಾರರ ಮೇಲೆ ಪರಿಣಾಮವಾಗಿಲ್ಲ ಎಂದರು. ಸರ್ಕಾರ ರಚನೆಯಾಗಿ ಐದಾರು ದಿನಗಳು ಕಳೆದಿದ್ದು, ಹಿಂದಿನ ಸರ್ಕಾರದಲ್ಲಿ ಟೆಂಡರ್‌ ಆಗಿರುವುದಕ್ಕೆ ತಡೆ ನೀಡಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಟೆಂಡರ್‌ ಆಗಿರುವ ಸುಮಾರು .100 ಕೋಟಿಗಳ ಕಾಮಗಾರಿಗೆ ಹಿನ್ನಡೆ ಆಗುವ ಸಾಧ್ಯತೆಯಿದೆ ಎಂದರು. ಪಿಎಸ್‌ಐ ಹಗರಣ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗಟ್ಟಬೇಕು.

ತಾಲೂಕಿನ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಕಾಂಗ್ರೆಸ್‌ ಮುಖಂಡರ ಹೇಳಿಕೆಯನ್ನು ಖಂಡಿಸಿ, ಅಧಿಕಾರಿಗಳನ್ನು ಬ್ಲಾಕ್‌ ಮೈಲ್‌ ಮಾಡುವ ಯತ್ನ ಕೈಬಿಡಬೇಕು. ಇಲ್ಲಿಗೆ ನಾನು ಶಾಸಕನಾಗಿದ್ದೇನೆ. ಈ ಕ್ಷೇತ್ರದ ಜನತೆಯ ನಾಡಿಮಿಡಿತವನ್ನು ಅರಿತಿರುವ ನಾನು ಈ ಕ್ಷೇತ್ರಕ್ಕೆ ಈ ಮೊದಲು ಯಾರೂ ಮಾಡಿರದಷ್ಟುಅಭಿವೃದ್ಧಿ ಕಾರ್ಯವನ್ನು ಮಾಡಿದ್ದೇನೆ. ರಾಜಕೀಯವನ್ನು ವ್ರತವಾಗಿ ಸ್ವೀಕರಿಸಿದ್ದೇನೆ. ನಮ್ಮ ಅಭಿವೃದ್ಧಿ ಕಾರ್ಯಗಳು ಮತ್ತು ಕಾರ್ಯಕರ್ತರ ಶ್ರಮದಿಂದ ದಾಖಲೆಯ 5ನೇ ಬಾರಿಗೆ ಗೆಲುವು ಸಾಧಿಸಿದ್ದೇವೆ. ಪ್ರಾಮಾಣಿಕ ಕಾರ್ಯಕರ್ತರೇ ಇಲ್ಲದ ಕಾಂಗ್ರೆಸ್‌ನವರು ಗೆದ್ದೇ ಗೆಲ್ತೀವಿ ಎಂಬ ಭ್ರಮೆಯಲ್ಲಿದ್ದರು ಎಂದೂ ಟೀಕಿಸಿದರು.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

10 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

10 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

12 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

12 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

12 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

20 hours ago