BREAKING NEWS

ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ : ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು ಬೆಂಗಳೂರಿನಲ್ಲಿ ಬುಧವಾರ ತಿಳಿಸಿದ್ದಾರೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಬೆಂಗಳೂರಿನಲ್ಲಿ ಹೇಳಿದ್ದಾರೆ. ರೈತರಿಂದ ಖರೀದಿಸುವ ಹಾಲಿನ ದರ ಏರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿಯೂ ಉತ್ತಮವಾದ ಹೈನುಗಾರಿಕೆ ಇದೆ. ರೈತರಿಗೆ ಹೆಚ್ಚಿನ ಲಾಭ ನೀಡುವ ಕಡೆ ಗಮನ ಹರಿಸುತ್ತೇವೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಈ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಇತ್ತೀಚೆಗೆ ಒಕ್ಕೂಟ ಮುಂದಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ನಿರ್ಧರಿಸಿತ್ತು. ಆದರೆ, ಗ್ರಾಹಕರಿಗೆ ದರ ಹೆಚ್ಚಳದ ಶಾಕ್ ನೀಡುವ ಸುಳಿವು ನೀಡಿತ್ತು.

lokesh

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

7 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

9 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

9 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

9 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

9 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

10 hours ago