BREAKING NEWS

ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ : ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಸುಳಿವು

ಬೆಂಗಳೂರು : ಕರ್ನಾಟಕ ಹಾಲು ಮಾರಾಟ ಮಹಾಮಂಡಳದ (KMF) ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್ ಅವರು ನಂದಿನಿ ಹಾಲಿನ ದರ ಹೆಚ್ಚಳದ ಸುಳಿವು ನೀಡಿದ್ದಾರೆ. ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದೇವೆ ಎಂದು ಅವರು ಬೆಂಗಳೂರಿನಲ್ಲಿ ಬುಧವಾರ ತಿಳಿಸಿದ್ದಾರೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆಗೆ ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಬೆಂಗಳೂರಿನಲ್ಲಿ ಹೇಳಿದ್ದಾರೆ. ರೈತರಿಂದ ಖರೀದಿಸುವ ಹಾಲಿನ ದರ ಏರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿಯೂ ಉತ್ತಮವಾದ ಹೈನುಗಾರಿಕೆ ಇದೆ. ರೈತರಿಗೆ ಹೆಚ್ಚಿನ ಲಾಭ ನೀಡುವ ಕಡೆ ಗಮನ ಹರಿಸುತ್ತೇವೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಈ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಇತ್ತೀಚೆಗೆ ಒಕ್ಕೂಟ ಮುಂದಾಗಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ನಿರ್ಧರಿಸಿತ್ತು. ಆದರೆ, ಗ್ರಾಹಕರಿಗೆ ದರ ಹೆಚ್ಚಳದ ಶಾಕ್ ನೀಡುವ ಸುಳಿವು ನೀಡಿತ್ತು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago