BREAKING NEWS

ಡಿ.ಕೆ.ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆ ಶೀಘ್ರವೇ ಬಹಿರಂಗ: ಎಚ್‌ಡಿಕೆ

ಬೆಂಗಳೂರು : ‘ನೈಸ್ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದಿದ್ದು, 2004ರಲ್ಲಿ ಡಿ.ಕೆ.ಶಿವಕುಮಾರ್ ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆ ಉದ್ಧಾರಕ್ಕೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ?’ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರವಿವಾರ ರಾಮನಗರದಲ್ಲಿ ಮಾತನಾಡಿದ ಅವರು, ‘ನಾಳೆ ಅಥವಾ ನಾಡಿದ್ದು ನೈಸ್ ಅಕ್ರಮಗಳು, ಡಿ.ಕೆ.ಸಹೋದರು ಕೊಳ್ಳೆ ಹೊಡೆದಿರುವ ನೈಸ್ ಭೂಮಿಯ ದಾಖಲೆಗಳನ್ನು ಬಹಿರಂಗ ಮಾಡುತ್ತೇನೆ. ನೈಸ್ ಭೂಮಿ ಸೇರಿ ಬೆಂಗಳೂರಿನ ಸುತ್ತಾ ರೈತರ ಭೂಮಿ ಲೂಟಿ ಮಾಡಿಕೊಂಡು ಬದುಕುತ್ತಿದ್ದಾನೆ. 2013ರಲ್ಲಿ ಎಂ.ಪಿ. ಆಗುವುದಕ್ಕೆ ಮುಂಚೆ ಇವನ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಹಿ ಹಾಕಿದ್ದು ಗೌಡರೇ: ‘ನೈಸ್ ಯೋಜನೆಗೆ ದೇವೇಗೌಡರೇ ಒಪ್ಪಂದ ಮಾಡಿಕೊಂಡಿದ್ದು. ಇಲ್ಲ ಎಂದು ನಾನೆಲ್ಲಿ ಹೇಳಿದೆ, ಅವರು ರಸ್ತೆ ಆಗಲಿ ಎಂದು ಒಪ್ಪಂದ ಮಾಡಿಕೊಂಡರು. ಬೆಂಗಳೂರು-ಮೈಸೂರು ಜನಕ್ಕೆ ಅನುಕೂಲವಾಗಲಿ ಎಂದು ಈ ಯೋಜನೆಗೆ ಅವರು ಒಪ್ಪಿಗೆ ನೀಡಿದರು. ಬೆಂಗಳೂರು-ಮೈಸೂರು ನಡುವೆ ನಾಲ್ಕುಪಥದ ಹೆದ್ದಾರಿ ಮಾಡಬೇಕೆಂದು ದೇವಗೌಡರು ತೀರ್ಮಾನ ಮಾಡಿದರು. ಹಣ ಇಲ್ಲ ಎನ್ನುವ ಕಾರಣಕ್ಕೆ ಹೆಗಡೆ ಕಾಲದಲ್ಲಿ ಆ ಯೋಜನೆ ಆಗಲಿಲ್ಲ. ಕೊನೆಗೆ ದೇವೇಗೌಡರು ಸಿಎಂ ಆದ ಮೇಲೆ ಈ ಯೋಜನೆಗೆ ಚಾಲನೆ ನೀಡಿದರು ಎಂದು ತಿಳಿಸಿದರು.

ಲೂಟಿಯಲ್ಲಿ ಸಹೋದರರ ಪಾಲು ಎಷ್ಟಿದೆ?: ದೇವೇಗೌಡರು ಮಾಡಿಕೊಂಡ ಒಪ್ಪಂದದಂತೆ ರಸ್ತೆ ಆಗಿದ್ದಿದ್ದರೆ ಏಷ್ಯಾ ಖಂಡದಲ್ಲಿಯೇ ಬೆಂಗಳೂರು-ಮೈಸೂರು ನಗರಗಳು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಆಗುತ್ತಿದ್ದವು. ವಾಣಿಜ್ಯ ಚಟುವಟಿಕೆಗಳು ಹೆಚ್ಚಿ ಜನರಿಗೆ ಜೀವನೋಪಾಯ ಸಿಗುತ್ತಿತ್ತು. ಆದರೆ, ಈ ಲೂಟಿಕೋರರು ಮಾಡಿದ್ದೇನು? ಬೆಂಗಳೂರು ಸುತ್ತಾಮುತ್ತ ರೈತರ ಭೂಮಿಯನ್ನು ಕೊಳ್ಳೆ ಹೊಡೆದರು’ ಎಂದು ಅವರು ಟೀಕಿಸಿದರು.

‘ನೈಸ್ ಕಂಪೆನಿ ಮಾಡಿರುವ ಲೂಟಿಯಲ್ಲಿ ಡಿ.ಕೆ.ಸಹೋದರರ ಪಾಲು ಎಷ್ಟಿದೆ? ಈ ಬಗ್ಗೆ ದಾಖಲೆಗಳನ್ನೇ ಹೊರಗಿಡುತ್ತೇನೆ. 2004ರಲ್ಲಿ ಇವರ ಅಣ್ಣ (ಡಿ.ಕೆ.ಸುರೇಶ್ ಅಣ್ಣ ಡಿ.ಕೆ.ಶಿವಕುಮಾರ್) ರಾಮನಗರ ಜಿಲ್ಲೆ ಉದ್ಧಾರ ಮಾಡುವುದಕ್ಕೆ ಮಂತ್ರಿ ಆಗಿದ್ದರೋ ಅಥವಾ ನೈಸ್ ಕಂಪೆನಿ ಉದ್ಧಾರ ಮಾಡಿ ದುಡ್ಡು ಹೊಡೆಯೋದಕ್ಕೆ ಮಂತ್ರಿ ಆಗಿದ್ದರೋ? ಎಲ್ಲ ದಾಖಲೆಗಳನ್ನು ನಾಳೆ-ನಾಡಿದ್ದರಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದು ಪ್ರಕಟಿಸಿದರು.

ಮೆಡಿಕಲ್ ಕಾಲೇಜ್ ಕನಕಪುರಕ್ಕೆ ಯಾಕೆ?: ‘ರಾಮನಗರ ಜಿಲ್ಲೆ ಜನರಿಗೆ ನನ್ನಿಂದ ಕಿಂಚಿತ್ತೂ ಅನ್ಯಾಯ ಆಗಿಲ್ಲ. ಜಿಲ್ಲೆಯ ಜನರನ್ನು ನಾನು ತಂದೆ-ತಾಯಿ ಸ್ಥಾನದಲ್ಲಿಟ್ಟು ನೋಡುವವನು. ಸ್ವಷ್ಟವಾಗಿ ಹೇಳಬಯಸುತ್ತೇನೆ. ಕಳೆದ ಚುನಾವಣೆ ಫಲಿತಾಂಶದ ಬಗ್ಗೆ ನಾನು ಜನರಿಗೆ ದೋಷ ಕೊಡಲ್ಲ. ನಾನು ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆ ಏನು ಎಂಬುದು ಆ ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ ಎಂದು ಕುಮಾರಸ್ವಾಮಿ ಉತ್ತರಿಸಿದರು.

ರಾಮನಗರಕ್ಕೆ ರಾಜೀವ್‍ಗಾಂಧಿ ವೈದ್ಯಕೀಯ ವಿವಿ ಕೊಟ್ಟವನು ನಾನು. ಆಮೇಲೆ ಪ್ರತ್ಯೇಕವಾಗಿ ಇವರ ಹಿಂಸೆ ತಾಳಲಾರದೆ 100 ಕೋಟಿ ರೂ.ಮೀಸಲಿಟ್ಟು ಕನಕಪುರಕ್ಕೆ ಮೆಡಿಕಲ್ ಕಾಲೇಜ್ ಮಂಜೂರು ಮಾಡಿದೆ. ಆಮೇಲೆ ಬಂದ ಬಿಜೆಪಿ ಸರಕಾರದವರು ಅದನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಈಗ ರಾಮನಗರದಲ್ಲಿ ಮಾಡಬೇಕಾದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗ್ತಾ ಇದ್ದಾರೆ, ಎಲ್ಲೋ ಮೂಲೆಗೆ. ಇದು ಇವರು ರಾಮನಗರಕ್ಕೆ ಕೊಡುತ್ತಿರುವ ಬಳುವಳಿ’ ಎಂದು ಟೀಕಿಸಿದರು.

andolanait

Recent Posts

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

2 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

4 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

4 hours ago