BREAKING NEWS

ಹೊಸಾ ಮಾದರಿಯಲ್ಲಿ ಬರುತ್ತಿದ್ದಾಳೆ ರಾಜ್ಯದ ಕೆಂಪು ಸುಂದರಿ !

ಬೆಂಗಳೂರು : ಕೆಎಸ್​ಆರ್​ಟಿಸಿ ಸಂಸ್ಥೆಯಿಂದ ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು.
ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.

ವಿಶೇಷತೆಗಳು :  ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್​ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.

* 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

  • ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ.
  • ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.
  • ಸ್ಲೀಪರ್, ಐರಾವತ ಕ್ಲಬ್​ ಕ್ಲಾಸ್​, ಅಂಬಾರಿಯಂಥ ವಿಶೇಷ ಬಸ್​​ಗಳನ್ನು ಹೊರತುಪಡಿಸಿ ಇತರ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಅದರಂತೆ, ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.
andolanait

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

2 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

4 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

4 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

4 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

4 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

5 hours ago