BREAKING NEWS

ಹೊಸಾ ಮಾದರಿಯಲ್ಲಿ ಬರುತ್ತಿದ್ದಾಳೆ ರಾಜ್ಯದ ಕೆಂಪು ಸುಂದರಿ !

ಬೆಂಗಳೂರು : ಕೆಎಸ್​ಆರ್​ಟಿಸಿ ಸಂಸ್ಥೆಯಿಂದ ಹೊಸ ಅಶ್ವಮೇಧ ಕ್ಲಾಸಿಕ್​ ಬಸ್​​​ಗಳನ್ನು ಕಾರ್ಯಾಚರಣೆಗೆ ಇಳಿಸುತ್ತಿದೆ. ಮಹಿಳಾ ಸುರಕ್ಷತೆ ದೃಷ್ಟಿಯಿಂದ ಹಲವು ಹೊಸ ಫೀಚರ್​ಗಳನ್ನು ಒಳಗೊಂಡಿರುವ ಈ ನಾನ್ ಎಸಿ ಬಸ್​​ಗಳಲ್ಲಿ ಕೂಡ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ.ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಬಸ್‌ಗಳಿಗೆ ಹಸಿರು ನಿಶಾನೆ ತೋರಿದರು.
ಏಪ್ರಿಲ್ ವೇಳೆಗೆ 800 ಅಶ್ವಮೇಧ ಕ್ಲಾಸಿಕ್ ಬಸ್‌ಗಳು ರಸ್ತೆಗೆ ಇಳಿಯಲಿದ್ದು, ಸೋಮವಾರ ಮೊದಲ ಹಂತದಲ್ಲಿ 100 ಬಸ್‌ಗಳಿಗೆ ಚಾಲನೆ ನೀಡಿದ್ದಾರೆ.

ವಿಶೇಷತೆಗಳು :  ಸದ್ಯ ಕಾರ್ಯಾರಂಭ ಮಾಡುತ್ತಿರುವ ನೂರು ಅಶ್ವಮೇಧ ಕ್ಲಾಸಿಕ್​ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ.

* 52 ಸೀಟು, ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್‌ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

  • ಅಶ್ವಮೇಧ ಕ್ಲಾಸಿಕ್​ ಬಸ್​​​ಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರದಿಂದ ರಾಜಧಾನಿಗೆ ಸಂಪರ್ಕ ಕಲ್ಪಿಸುವ ಪಾಯಿಂಟ್ ಟೂ ಪಾಯಿಂಟ್ ಎಕ್ಸ್‌ಪ್ರೆಸ್ ಬಸ್ಸುಗಳಾಗಿವೆ.
  • ಮಹಿಳೆಯರು ಈ ಬಸ್ಸುಗಳಲ್ಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಚುನಾವಣಾ ಪೂರ್ವ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೊಳಿಸಿತ್ತು.
  • ಸ್ಲೀಪರ್, ಐರಾವತ ಕ್ಲಬ್​ ಕ್ಲಾಸ್​, ಅಂಬಾರಿಯಂಥ ವಿಶೇಷ ಬಸ್​​ಗಳನ್ನು ಹೊರತುಪಡಿಸಿ ಇತರ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಅದರಂತೆ, ಇದೀಗ ಅಶ್ವಮೇಧ ಬಸ್​ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಘೋಷಣೆ ಮಾಡಲಾಗಿದೆ.
andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago