BREAKING NEWS

ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದ ನಿವಾಸಿಗಳು

ಹಾಸನ : ತಮ್ಮ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಹಾಸನ ಜಿಲ್ಲೆ ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ತಮ್ಮ ಗ್ರಾಮದಲ್ಲೇ ಮತಗಟ್ಟೆ ತೆರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಲ್ಲದೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಗುಂಪು ಸೇರಿದ ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಬೋವಿ ಕಾಲೋನಿ ಗ್ರಾಮಸ್ಥರು, ನಮ್ಮ ಕಾಲೋನಿ ಗ್ರಾಮದಲ್ಲಿ 550 ಮತದಾರರಿದ್ದಾರೆ. ಮತದಾನ ಮಾಡಲು ಎರಡು ಕಿಲೋ ಮೀಟರ್ ಹೋಗಿ ನರಸೀಪುರ ಗ್ರಾಮದಲ್ಲಿ ಮತ ಚಲಾಯಿಸಬೇಕು. ಗ್ರಾಮದಲ್ಲಿ ವಯೋವೃದ್ಧರು, ಅನಾರೋಗ್ಯ ಪೀಡಿತರಿದ್ದಾರೆ. 2 ಕಿಲೋ ಮೀಟರ್ ಹೋಗಿ ಮತದಾನ ಮಾಡಲು ಕಷ್ಟ ಆಗುತ್ತೆ. ಹೀಗಾಗಿ ಬೋವಿ ಕಾಲೋನಿಯಲ್ಲೇ ಮತಗಟ್ಟೆ ತೆರೆಯಿರಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಮತದಾನಕ್ಕೆ ಜಿಲ್ಲಾಡಳಿತದಿಂದ ಸಿದ್ಧತೆ : ಹಾಸನ ಜಿಲ್ಲೆಯಲ್ಲಿ ಮತದಾನಕ್ಕೆ ಜಿಲ್ಲಾಡಳಿತ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ 2,000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಆಯಾ ಕ್ಷೇತ್ರದ ತಾಲ್ಲೂಕು ಕೇಂದ್ರದಿಂದ ಮತಯಂತ್ರ ಪರಿಶೀಲನೆ ಬಳಿಕ ಮತಗಟ್ಟೆಯತ್ತ ಸಿಬ್ಬಂದಿ ತೆರಳುತ್ತಿದ್ದಾರೆ. ಮೇ 10ರ ಬೆಳಗ್ಗೆ ಆರಂಭವಾಗುವ ಮತದಾನಕ್ಕೆ ಸಕಲ ಸಿದ್ದತೆ ಜೊತೆ ಮತಗಟ್ಟೆಗೆ ಸಿಬ್ಬಂದಿ ತೆರಳುತ್ತಿದ್ದಾರೆ. ಹಾಸನ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಮತದಾನಕ್ಕಾಗಿ 2000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಮುಕ್ತ ಮತದಾನಕ್ಕಾಗಿ 10 ಸಾವಿರಕ್ಕೂ ಅಧಿಕ ಮತಗಟ್ಟೆ ಸಿಬ್ಬಂದಿ, ಆರು ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. 14 ಲಕ್ಷದ 99 ಸಾವಿರ ಮತದಾರರು ಜಿಲ್ಲೆಯ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಹಾಸನದ ಕಲಾ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ.
lokesh

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

13 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

30 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

43 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago