BREAKING NEWS

ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದ ನಿವಾಸಿಗಳು

ಹಾಸನ : ತಮ್ಮ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಹಾಸನ ಜಿಲ್ಲೆ ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ತಮ್ಮ ಗ್ರಾಮದಲ್ಲೇ ಮತಗಟ್ಟೆ ತೆರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಲ್ಲದೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಗುಂಪು ಸೇರಿದ ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಬೋವಿ ಕಾಲೋನಿ ಗ್ರಾಮಸ್ಥರು, ನಮ್ಮ ಕಾಲೋನಿ ಗ್ರಾಮದಲ್ಲಿ 550 ಮತದಾರರಿದ್ದಾರೆ. ಮತದಾನ ಮಾಡಲು ಎರಡು ಕಿಲೋ ಮೀಟರ್ ಹೋಗಿ ನರಸೀಪುರ ಗ್ರಾಮದಲ್ಲಿ ಮತ ಚಲಾಯಿಸಬೇಕು. ಗ್ರಾಮದಲ್ಲಿ ವಯೋವೃದ್ಧರು, ಅನಾರೋಗ್ಯ ಪೀಡಿತರಿದ್ದಾರೆ. 2 ಕಿಲೋ ಮೀಟರ್ ಹೋಗಿ ಮತದಾನ ಮಾಡಲು ಕಷ್ಟ ಆಗುತ್ತೆ. ಹೀಗಾಗಿ ಬೋವಿ ಕಾಲೋನಿಯಲ್ಲೇ ಮತಗಟ್ಟೆ ತೆರೆಯಿರಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಮತದಾನಕ್ಕೆ ಜಿಲ್ಲಾಡಳಿತದಿಂದ ಸಿದ್ಧತೆ : ಹಾಸನ ಜಿಲ್ಲೆಯಲ್ಲಿ ಮತದಾನಕ್ಕೆ ಜಿಲ್ಲಾಡಳಿತ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ 2,000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಆಯಾ ಕ್ಷೇತ್ರದ ತಾಲ್ಲೂಕು ಕೇಂದ್ರದಿಂದ ಮತಯಂತ್ರ ಪರಿಶೀಲನೆ ಬಳಿಕ ಮತಗಟ್ಟೆಯತ್ತ ಸಿಬ್ಬಂದಿ ತೆರಳುತ್ತಿದ್ದಾರೆ. ಮೇ 10ರ ಬೆಳಗ್ಗೆ ಆರಂಭವಾಗುವ ಮತದಾನಕ್ಕೆ ಸಕಲ ಸಿದ್ದತೆ ಜೊತೆ ಮತಗಟ್ಟೆಗೆ ಸಿಬ್ಬಂದಿ ತೆರಳುತ್ತಿದ್ದಾರೆ. ಹಾಸನ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಮತದಾನಕ್ಕಾಗಿ 2000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಮುಕ್ತ ಮತದಾನಕ್ಕಾಗಿ 10 ಸಾವಿರಕ್ಕೂ ಅಧಿಕ ಮತಗಟ್ಟೆ ಸಿಬ್ಬಂದಿ, ಆರು ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. 14 ಲಕ್ಷದ 99 ಸಾವಿರ ಮತದಾರರು ಜಿಲ್ಲೆಯ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಹಾಸನದ ಕಲಾ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ.
lokesh

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

8 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

8 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

8 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

8 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

13 hours ago