BREAKING NEWS

ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದ ನಿವಾಸಿಗಳು

ಹಾಸನ : ತಮ್ಮ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಹಾಸನ ಜಿಲ್ಲೆ ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ತಮ್ಮ ಗ್ರಾಮದಲ್ಲೇ ಮತಗಟ್ಟೆ ತೆರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಲ್ಲದೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಗುಂಪು ಸೇರಿದ ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಬೋವಿ ಕಾಲೋನಿ ಗ್ರಾಮಸ್ಥರು, ನಮ್ಮ ಕಾಲೋನಿ ಗ್ರಾಮದಲ್ಲಿ 550 ಮತದಾರರಿದ್ದಾರೆ. ಮತದಾನ ಮಾಡಲು ಎರಡು ಕಿಲೋ ಮೀಟರ್ ಹೋಗಿ ನರಸೀಪುರ ಗ್ರಾಮದಲ್ಲಿ ಮತ ಚಲಾಯಿಸಬೇಕು. ಗ್ರಾಮದಲ್ಲಿ ವಯೋವೃದ್ಧರು, ಅನಾರೋಗ್ಯ ಪೀಡಿತರಿದ್ದಾರೆ. 2 ಕಿಲೋ ಮೀಟರ್ ಹೋಗಿ ಮತದಾನ ಮಾಡಲು ಕಷ್ಟ ಆಗುತ್ತೆ. ಹೀಗಾಗಿ ಬೋವಿ ಕಾಲೋನಿಯಲ್ಲೇ ಮತಗಟ್ಟೆ ತೆರೆಯಿರಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಮತದಾನಕ್ಕೆ ಜಿಲ್ಲಾಡಳಿತದಿಂದ ಸಿದ್ಧತೆ : ಹಾಸನ ಜಿಲ್ಲೆಯಲ್ಲಿ ಮತದಾನಕ್ಕೆ ಜಿಲ್ಲಾಡಳಿತ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ 2,000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಆಯಾ ಕ್ಷೇತ್ರದ ತಾಲ್ಲೂಕು ಕೇಂದ್ರದಿಂದ ಮತಯಂತ್ರ ಪರಿಶೀಲನೆ ಬಳಿಕ ಮತಗಟ್ಟೆಯತ್ತ ಸಿಬ್ಬಂದಿ ತೆರಳುತ್ತಿದ್ದಾರೆ. ಮೇ 10ರ ಬೆಳಗ್ಗೆ ಆರಂಭವಾಗುವ ಮತದಾನಕ್ಕೆ ಸಕಲ ಸಿದ್ದತೆ ಜೊತೆ ಮತಗಟ್ಟೆಗೆ ಸಿಬ್ಬಂದಿ ತೆರಳುತ್ತಿದ್ದಾರೆ. ಹಾಸನ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಮತದಾನಕ್ಕಾಗಿ 2000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಮುಕ್ತ ಮತದಾನಕ್ಕಾಗಿ 10 ಸಾವಿರಕ್ಕೂ ಅಧಿಕ ಮತಗಟ್ಟೆ ಸಿಬ್ಬಂದಿ, ಆರು ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. 14 ಲಕ್ಷದ 99 ಸಾವಿರ ಮತದಾರರು ಜಿಲ್ಲೆಯ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಹಾಸನದ ಕಲಾ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ.
lokesh

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

5 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

6 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

8 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

13 hours ago