BREAKING NEWS

ಗ್ರಾಮದಲ್ಲಿ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆಗಿಳಿದ ನಿವಾಸಿಗಳು

ಹಾಸನ : ತಮ್ಮ ಗ್ರಾಮಕ್ಕೆ ಪ್ರತ್ಯೇಕ ಮತಗಟ್ಟೆ ತೆರೆಯುವಂತೆ ಒತ್ತಾಯಿಸಿ ಹಾಸನ ಜಿಲ್ಲೆ ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಬೋವಿ ಕಾಲೋನಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ತಮ್ಮ ಗ್ರಾಮದಲ್ಲೇ ಮತಗಟ್ಟೆ ತೆರೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಲ್ಲದೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಬೇಲೂರು ತಹಶೀಲ್ದಾರ್ ಕಚೇರಿ ಬಳಿ ಗುಂಪು ಸೇರಿದ ಬೇಲೂರು ತಾಲೂಕಿನ ಹಳೇಬೀಡು ಹೋಬಳಿ ಬೋವಿ ಕಾಲೋನಿ ಗ್ರಾಮಸ್ಥರು, ನಮ್ಮ ಕಾಲೋನಿ ಗ್ರಾಮದಲ್ಲಿ 550 ಮತದಾರರಿದ್ದಾರೆ. ಮತದಾನ ಮಾಡಲು ಎರಡು ಕಿಲೋ ಮೀಟರ್ ಹೋಗಿ ನರಸೀಪುರ ಗ್ರಾಮದಲ್ಲಿ ಮತ ಚಲಾಯಿಸಬೇಕು. ಗ್ರಾಮದಲ್ಲಿ ವಯೋವೃದ್ಧರು, ಅನಾರೋಗ್ಯ ಪೀಡಿತರಿದ್ದಾರೆ. 2 ಕಿಲೋ ಮೀಟರ್ ಹೋಗಿ ಮತದಾನ ಮಾಡಲು ಕಷ್ಟ ಆಗುತ್ತೆ. ಹೀಗಾಗಿ ಬೋವಿ ಕಾಲೋನಿಯಲ್ಲೇ ಮತಗಟ್ಟೆ ತೆರೆಯಿರಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಜೊತೆಗೆ ಮತಗಟ್ಟೆ ತೆರೆಯದಿದ್ದರೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.
ಮತದಾನಕ್ಕೆ ಜಿಲ್ಲಾಡಳಿತದಿಂದ ಸಿದ್ಧತೆ : ಹಾಸನ ಜಿಲ್ಲೆಯಲ್ಲಿ ಮತದಾನಕ್ಕೆ ಜಿಲ್ಲಾಡಳಿತ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹಾಸನ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ 2,000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಆಯಾ ಕ್ಷೇತ್ರದ ತಾಲ್ಲೂಕು ಕೇಂದ್ರದಿಂದ ಮತಯಂತ್ರ ಪರಿಶೀಲನೆ ಬಳಿಕ ಮತಗಟ್ಟೆಯತ್ತ ಸಿಬ್ಬಂದಿ ತೆರಳುತ್ತಿದ್ದಾರೆ. ಮೇ 10ರ ಬೆಳಗ್ಗೆ ಆರಂಭವಾಗುವ ಮತದಾನಕ್ಕೆ ಸಕಲ ಸಿದ್ದತೆ ಜೊತೆ ಮತಗಟ್ಟೆಗೆ ಸಿಬ್ಬಂದಿ ತೆರಳುತ್ತಿದ್ದಾರೆ. ಹಾಸನ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಮತದಾನಕ್ಕಾಗಿ 2000 ಮತಗಟ್ಟೆ ನಿರ್ಮಾಣ ಮಾಡಲಾಗಿದ್ದು ಮುಕ್ತ ಮತದಾನಕ್ಕಾಗಿ 10 ಸಾವಿರಕ್ಕೂ ಅಧಿಕ ಮತಗಟ್ಟೆ ಸಿಬ್ಬಂದಿ, ಆರು ಸಾವಿರಕ್ಕೂ ಅಧಿಕ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. 14 ಲಕ್ಷದ 99 ಸಾವಿರ ಮತದಾರರು ಜಿಲ್ಲೆಯ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಹಾಸನದ ಕಲಾ ಕಾಲೇಜಿನಲ್ಲಿ ಮಸ್ಟರಿಂಗ್ ಕಾರ್ಯ ನಡೆಯುತ್ತಿದೆ.
lokesh

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago