BREAKING NEWS

ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ : ಅಶ್ವಿನಿ ವೈಷ್ಣವ್

ನವದೆಹಲಿ : ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್​ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, 1,100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ ಹಾಗೂ ಈ ಅವಘಡಕ್ಕೆ ಕಾರಣರಾದವರನ್ನು ಗುರುತಿಸಿದ್ದಾರೆ. ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ನಲ್ಲಿರುವ ಬದಲಾವಣೆಯಿಂದ ಇದು ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇದೀಗ ದುರಸ್ತಿ ಕಾರ್ಯದ ಕಡೆಗೆ ಸಚಿವರು ಹೆಚ್ಚಿನ ಗಮನಹರಿಸಿದ್ದಾರೆ. ಜೂನ್​ 7ರ ಹೊತ್ತಿಗೆ ಕಾರ್ಯಗಳು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸ್ಥಳ ಪರಿಶೀಲನೆ ನಡೆಸಿದರು, ಮೃತದೇಹಗಳನ್ನು ಸಾಗಿಸುವ ಕೆಲಸಗಳು ಪೂರ್ಣಗೊಂಡಿದೆ. ಬುಧವಾರದಷ್ಟೊತ್ತಿಗೆ ಮರುಸ್ಥಾಪನೆ ಕಾರ್ಯ ಪೂರ್ಣಗೊಳ್ಳಲಿದ್ದು, ರೈಲು ಎಂದಿನಂತೆ ಸಂಚರಿಸಬಹುದು ಎಂದಿದ್ದಾರೆ.

ಈ ರೈಲಿನ ಕೆಲವು ಬೋಗಿಗಳು ಹಾದುಹೋಗುತ್ತಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಹಿಂಭಾಗಕ್ಕೂ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದಾರೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಸುಮಾರು 56 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಶನಿವಾರ ಮಧ್ಯಾಹ್ನದ ವೇಳೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಬಳಿಕ ಅಪಘಾತದ ಕೋಚ್‌ಗಳನ್ನು ತೆಗೆದುಹಾಕಲಾಗಿದ್ದು, ಈಗ ಟ್ರ್ಯಾಕ್‌ಗಳನ್ನು ಹಾಕುವ ಮತ್ತು ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. 1000ಕ್ಕೂ ಹೆಚ್ಚು ರೈಲ್ವೆ ನೌಕರರು ಈ ಕಾರ್ಯದಲ್ಲಿ ತೊಡಗಿದ್ದಾರೆ, ದುರಸ್ತಿ ಕಾರ್ಯಕ್ಕಾಗಿ 7ಕ್ಕೂ ಹೆಚ್ಚು ಪೊಕ್ಲೆನ್ ಯಂತ್ರಗಳು, ಕ್ರೇನ್ ಇತ್ಯಾದಿಗಳನ್ನು ಅಳವಡಿಸಲಾಗಿದೆ.

lokesh

Recent Posts

ಲೈಕ್‌,ಫಾಲೋವರ್ಸ್‌ ಕ್ರೇಜ್‌ಗೆ ಬೈಕ್‌ ವೀಲಿಂಗ್‌ : ಓರ್ವ ಅಪ್ರಾಪ್ತ ಬಂಧನ

ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…

3 mins ago

ಇಂದು ರಾಷ್ಟ್ರೀಯ ಮತದಾರರ ದಿನ : ನನ್ನ ಭಾರತ, ನನ್ನ ಮತ.. ಏನಿದರ ವಿಶೇಷತೆ?

ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…

46 mins ago

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

5 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

5 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

5 hours ago