BREAKING NEWS

ರೈಲು ಅಪಘಾತಕ್ಕೆ ಮೂಲ ಕಾರಣ ಹಾಗೂ ಕಾರಣಕರ್ತರನ್ನು ಪತ್ತೆಹಚ್ಚಲಾಗಿದೆ : ಅಶ್ವಿನಿ ವೈಷ್ಣವ್

ನವದೆಹಲಿ : ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್​ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, 1,100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ ಹಾಗೂ ಈ ಅವಘಡಕ್ಕೆ ಕಾರಣರಾದವರನ್ನು ಗುರುತಿಸಿದ್ದಾರೆ. ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ನಲ್ಲಿರುವ ಬದಲಾವಣೆಯಿಂದ ಇದು ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಇದೀಗ ದುರಸ್ತಿ ಕಾರ್ಯದ ಕಡೆಗೆ ಸಚಿವರು ಹೆಚ್ಚಿನ ಗಮನಹರಿಸಿದ್ದಾರೆ. ಜೂನ್​ 7ರ ಹೊತ್ತಿಗೆ ಕಾರ್ಯಗಳು ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಸ್ಥಳ ಪರಿಶೀಲನೆ ನಡೆಸಿದರು, ಮೃತದೇಹಗಳನ್ನು ಸಾಗಿಸುವ ಕೆಲಸಗಳು ಪೂರ್ಣಗೊಂಡಿದೆ. ಬುಧವಾರದಷ್ಟೊತ್ತಿಗೆ ಮರುಸ್ಥಾಪನೆ ಕಾರ್ಯ ಪೂರ್ಣಗೊಳ್ಳಲಿದ್ದು, ರೈಲು ಎಂದಿನಂತೆ ಸಂಚರಿಸಬಹುದು ಎಂದಿದ್ದಾರೆ.

ಈ ರೈಲಿನ ಕೆಲವು ಬೋಗಿಗಳು ಹಾದುಹೋಗುತ್ತಿದ್ದ ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ನ ಹಿಂಭಾಗಕ್ಕೂ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದಾರೆ. 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಸುಮಾರು 56 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಶನಿವಾರ ಮಧ್ಯಾಹ್ನದ ವೇಳೆಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಮುಗಿದಿದೆ. ಬಳಿಕ ಅಪಘಾತದ ಕೋಚ್‌ಗಳನ್ನು ತೆಗೆದುಹಾಕಲಾಗಿದ್ದು, ಈಗ ಟ್ರ್ಯಾಕ್‌ಗಳನ್ನು ಹಾಕುವ ಮತ್ತು ವಿದ್ಯುತ್ ಕಂಬಗಳು ಮತ್ತು ತಂತಿಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. 1000ಕ್ಕೂ ಹೆಚ್ಚು ರೈಲ್ವೆ ನೌಕರರು ಈ ಕಾರ್ಯದಲ್ಲಿ ತೊಡಗಿದ್ದಾರೆ, ದುರಸ್ತಿ ಕಾರ್ಯಕ್ಕಾಗಿ 7ಕ್ಕೂ ಹೆಚ್ಚು ಪೊಕ್ಲೆನ್ ಯಂತ್ರಗಳು, ಕ್ರೇನ್ ಇತ್ಯಾದಿಗಳನ್ನು ಅಳವಡಿಸಲಾಗಿದೆ.

lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

16 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

16 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

16 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

16 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

16 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

16 hours ago