BREAKING NEWS

ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡುವ ಯೋಜನೆಗೆ ಆಗಸ್ಟ್ 18ರಂದು ಚಾಲನೆ

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಿಂದ ಪ್ರಾರಂಭವಾಗಲಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆಯು ಉದ್ಘಾಟನೆಗೊಳ್ಳಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಮೊದಲು 8 ನೇ ತರಗತಿಯವರೆಗೆ ಈ ಯೋಜನೆ ಜಾರಿಗೊಳಿಸಬೇಕು ಎಂದಾಗಿತ್ತು. ಆದರೆ ಈಗ ಹತ್ತನೇ ತರಗತಿವರೆಗೂ ವಿಸ್ತರಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಹಿನ್ನಲೆಯಲ್ಲಿ ಈ ಯೋಜನೆಯು ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ವಾರದಲ್ಲಿ ಎರಡು ಬಾರಿ ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಿಸಲಾಗುವುದು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗಾಗಿ ಬಾಳೆಹಣ್ಣನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳು ಅಪೌಷ್ಠಿಕತೆ ಹಾಗೂ ಅನೀಮಿಯಾದಿಂದ ಬಳಲುತ್ತಿರುವುದರಿಂದ ಮೊಟ್ಟೆ ಅಥವಾ ಬಾಳೆಹಣ್ಣು ವಿತರಣೆ ಅನಿವಾರ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ಆದರೆ ಮೊಟ್ಟೆ ವಿತರಣೆ ವಿಚಾರವಾಗಿ ಆಕ್ಷೇಪಗಳು ವ್ಯಕ್ತವಾಗಿದ್ದವು. ಮೊಟ್ಟೆ ವಿತರಣೆಯು ವಿದ್ಯಾರ್ಥಿಗಳಲ್ಲಿ ಅಸಮಾನತೆಗೆ ಕಾರಣವಾಗಲಿದೆ ಎಂದು ಹಲವರು ವಾದಿಸಿದ್ದರು. ಆದರೆ, ಮೊಟ್ಟೆಯು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಅವಶ್ಯಕವಾಗಿದೆ. ಆರೋಗ್ಯಕರ ಆಹಾರ ಸೇವನೆಯಿಂದ ವಿದ್ಯಾರ್ಥಿಗಳಲ್ಲಿ ಕಲಿಕೆಯ ಸಾಮರ್ಥ್ಯವೂ ಹೆಚ್ಚಳವಾಗುತ್ತದೆ ಎಂದು ಮೊಟ್ಟೆ ವಿತರಣೆಯ ಪರ ಹಲವರು ಪ್ರತಿಪಾದಿಸಿದ್ದರು.

2007ರಲ್ಲಿಯೇ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಈ ಯೋಜನೆಯನ್ನು ಜಾರಿಗೊಳಿಸುವ ಕುರಿತು ಚಿಂತನೆ ನಡೆಸಿದ್ದರು. ಆದರೆ ಸಮಾಜದ ಕೆಲ ಗುಂಪುಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದರಿಂದ ಅಲ್ಲಿಗೆ ಕೈಬಿಡಲಾಗಿತ್ತು. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಚಿಕ್ಕಿಯನ್ನು ವಿತರಿಸುವುದಾಗಿ ಸರ್ಕಾರ ಹೇಳಿತ್ತು. ಈಗ ಚಿಕ್ಕಿ ನೀಡುವ ಯೋಜನೆಯನ್ನು ಕೈಬಿಟ್ಟು ಬಾಳೆಹಣ್ಣನ್ನು ನೀಡುವುದಾಗಿ ಘೋಷಿಸಿದೆ.
andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

9 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

10 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

10 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

10 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

11 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

12 hours ago