BREAKING NEWS

ತಮಿಳುನಾಡಿನಲ್ಲಿ RSS ಪಥಸಂಚಲನದ ಸದ್ದು

ಚೆನ್ನೈ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಡೆಯಿತು. ಪಥ ಸಂಚಲನವು ತನ್ನ ನಿಯಮಿತ ತರಬೇತಿಯ ಭಾಗವಾಗಿದೆ ಎಂದು ಆರ್ ಎಸ್ ಎಸ್ ಹೇಳಿದೆ.

ಆರ್ ಎಸ್ ಎಸ್ ಸ್ವಯಂಸೇವಕರು ಬಿಳಿ ಬಣ್ಣದ ಅಂಗಿ ಮತ್ತು ಖಾಕಿ ಪ್ಯಾಂಟ್ ಧರಿಸಿ ಪಾಲ್ಗೊಂಡಿದ್ದರು. ಪಥ ಸಂಚಲನ ನಡೆಯುವ ಮಾರ್ಗದ ಉದ್ದಕ್ಕೂ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಪಥ ಸಂಚಲನ ಶಾಂತಿಯುತವಾಗಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ, ಮದುರೈ, ಕಾಂಚಿಪುರಂ ಮತ್ತು ಚೆಂಗಲ್‌ಪೇಟೆ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಈ ಪಥಸಂಚಲನದಲ್ಲಿ ಕೇಂದ್ರ ಸಚಿವ ಎಲ್. ಮುರುಗನ್ ಪಾಲ್ಗೊಂಡರು. 

ಆರ್ ಎಸ್ ಎಸ್ ಗೆ ರಾಜ್ಯದಲ್ಲಿ ಪಥಸಂಚಲನ ನಡೆಸಲು ಅನುಮತಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್, ಇದೇ ಏಪ್ರಿಲ್‌ 11ರಂದು ಎತ್ತಿಹಿಡಿದಿದೆ.

ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ವೃತ್ತಿಪರರು, ಕೈಗಾರಿಕೆ, ಕಚೇರಿಗಳು ಹಾಗೂ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸ್ವಯಂಸೇವಕರಾಗಿ ಉತ್ತಮ ತರಬೇತಿ ಪಡೆದು, ಈ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಆರ್ ಎಸ್ ಎಸ್ ಹೇಳಿಕೆಯಲ್ಲಿ ತಿಳಿಸಿದೆ.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

5 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

6 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

6 hours ago