BREAKING NEWS

ತಮಿಳುನಾಡಿನಲ್ಲಿ RSS ಪಥಸಂಚಲನದ ಸದ್ದು

ಚೆನ್ನೈ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥ ಸಂಚಲನಕ್ಕೆ ಸುಪ್ರೀಂ ಕೋರ್ಟ್‌ನಿಂದ ಹಸಿರು ನಿಶಾನೆ ಸಿಕ್ಕಿದ ಬೆನ್ನಲ್ಲೇ ತಮಿಳುನಾಡಿನಾದ್ಯಂತ 45 ಸ್ಥಳಗಳಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಡೆಯಿತು. ಪಥ ಸಂಚಲನವು ತನ್ನ ನಿಯಮಿತ ತರಬೇತಿಯ ಭಾಗವಾಗಿದೆ ಎಂದು ಆರ್ ಎಸ್ ಎಸ್ ಹೇಳಿದೆ.

ಆರ್ ಎಸ್ ಎಸ್ ಸ್ವಯಂಸೇವಕರು ಬಿಳಿ ಬಣ್ಣದ ಅಂಗಿ ಮತ್ತು ಖಾಕಿ ಪ್ಯಾಂಟ್ ಧರಿಸಿ ಪಾಲ್ಗೊಂಡಿದ್ದರು. ಪಥ ಸಂಚಲನ ನಡೆಯುವ ಮಾರ್ಗದ ಉದ್ದಕ್ಕೂ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ಪಥ ಸಂಚಲನ ಶಾಂತಿಯುತವಾಗಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ, ಮದುರೈ, ಕಾಂಚಿಪುರಂ ಮತ್ತು ಚೆಂಗಲ್‌ಪೇಟೆ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಈ ಪಥಸಂಚಲನದಲ್ಲಿ ಕೇಂದ್ರ ಸಚಿವ ಎಲ್. ಮುರುಗನ್ ಪಾಲ್ಗೊಂಡರು. 

ಆರ್ ಎಸ್ ಎಸ್ ಗೆ ರಾಜ್ಯದಲ್ಲಿ ಪಥಸಂಚಲನ ನಡೆಸಲು ಅನುಮತಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್, ಇದೇ ಏಪ್ರಿಲ್‌ 11ರಂದು ಎತ್ತಿಹಿಡಿದಿದೆ.

ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ವೃತ್ತಿಪರರು, ಕೈಗಾರಿಕೆ, ಕಚೇರಿಗಳು ಹಾಗೂ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಸ್ವಯಂಸೇವಕರಾಗಿ ಉತ್ತಮ ತರಬೇತಿ ಪಡೆದು, ಈ ಸಂಘಟನೆಯ ಸದಸ್ಯರಾಗಿದ್ದಾರೆ ಎಂದು ಆರ್ ಎಸ್ ಎಸ್ ಹೇಳಿಕೆಯಲ್ಲಿ ತಿಳಿಸಿದೆ.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

6 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

8 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

8 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

12 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

17 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

17 hours ago