BREAKING NEWS

ಎಕ್ಸ್ ಪ್ರೆಸ್ ಹೈವೆ ಟೋಲ್‌ನಲ್ಲಿ ಶಾಸಕರಿಗೆ ಅವಾಜ್ ಹಾಕಿದ ಸಿಬ್ಬಂದಿ

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ.

ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರನ್ನು ಕುಂಬಳಗೊಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾದಲ್ಲಿ ಶಾಸಕರ ಕಾರನ್ನು ತಡೆದಿದ್ದಾರೆ. ಶಾಸಕ ನರೇಂದ್ರಸ್ವಾಮಿ ಬಳಿ ವಾಹನ ಪಾಸ್ ಇದ್ದರೂ ತಡೆದು ಚೆಕ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಈ ವೇಳೆ ಪೋಲಿಸರು ಬರಲಿ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಾರೆ. `ಯಾವ ಪೊಲೀಸರು ಬೇಕಾದರೂ ಬರಲಿ, ನಾನು ನೋಡಿರದ ಪೋಲಿಸಾ’ ಎಂದು ಏಕವಚನದಲ್ಲೇ ಟೋಲ್ ಸಿಬ್ಬಂದಿ ಶಾಸಕರಿಗೆ ಅವಾಜ್ ಹಾಕಿದ್ದಾರೆ.
ನಿಮ್ಮನ್ನ ಹೈವೆಯಲ್ಲಿ ಬಿಟ್ಟಿಯಾಗಿ ಬಿಡ್ತಾ ಇದ್ದೀವಿ ಎಂದು ಶಾಸಕರಿಗೆ ಟೋಲ್ ಸಿಬ್ಬಂದಿ ಅವಾಜ್ ಹಾಕಿದ್ದಾರೆ.

 

lokesh

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

8 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

8 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

9 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

9 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

10 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

11 hours ago