ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ.
ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರನ್ನು ಕುಂಬಳಗೊಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾದಲ್ಲಿ ಶಾಸಕರ ಕಾರನ್ನು ತಡೆದಿದ್ದಾರೆ. ಶಾಸಕ ನರೇಂದ್ರಸ್ವಾಮಿ ಬಳಿ ವಾಹನ ಪಾಸ್ ಇದ್ದರೂ ತಡೆದು ಚೆಕ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.
ಈ ವೇಳೆ ಪೋಲಿಸರು ಬರಲಿ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಾರೆ. `ಯಾವ ಪೊಲೀಸರು ಬೇಕಾದರೂ ಬರಲಿ, ನಾನು ನೋಡಿರದ ಪೋಲಿಸಾ’ ಎಂದು ಏಕವಚನದಲ್ಲೇ ಟೋಲ್ ಸಿಬ್ಬಂದಿ ಶಾಸಕರಿಗೆ ಅವಾಜ್ ಹಾಕಿದ್ದಾರೆ.
ನಿಮ್ಮನ್ನ ಹೈವೆಯಲ್ಲಿ ಬಿಟ್ಟಿಯಾಗಿ ಬಿಡ್ತಾ ಇದ್ದೀವಿ ಎಂದು ಶಾಸಕರಿಗೆ ಟೋಲ್ ಸಿಬ್ಬಂದಿ ಅವಾಜ್ ಹಾಕಿದ್ದಾರೆ.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…