ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ.
ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರನ್ನು ಕುಂಬಳಗೊಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾದಲ್ಲಿ ಶಾಸಕರ ಕಾರನ್ನು ತಡೆದಿದ್ದಾರೆ. ಶಾಸಕ ನರೇಂದ್ರಸ್ವಾಮಿ ಬಳಿ ವಾಹನ ಪಾಸ್ ಇದ್ದರೂ ತಡೆದು ಚೆಕ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.
ಈ ವೇಳೆ ಪೋಲಿಸರು ಬರಲಿ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಾರೆ. `ಯಾವ ಪೊಲೀಸರು ಬೇಕಾದರೂ ಬರಲಿ, ನಾನು ನೋಡಿರದ ಪೋಲಿಸಾ’ ಎಂದು ಏಕವಚನದಲ್ಲೇ ಟೋಲ್ ಸಿಬ್ಬಂದಿ ಶಾಸಕರಿಗೆ ಅವಾಜ್ ಹಾಕಿದ್ದಾರೆ.
ನಿಮ್ಮನ್ನ ಹೈವೆಯಲ್ಲಿ ಬಿಟ್ಟಿಯಾಗಿ ಬಿಡ್ತಾ ಇದ್ದೀವಿ ಎಂದು ಶಾಸಕರಿಗೆ ಟೋಲ್ ಸಿಬ್ಬಂದಿ ಅವಾಜ್ ಹಾಕಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…