ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯ ರಾಮನಗರ ಟೋಲ್ ಪ್ಲಾಜಾದಲ್ಲಿ ಶಾಸಕರ ಜತೆ ದಶಪಥ ಟೋಲ್ ಸಿಬ್ಬಂದಿಗಳು ಜಗಳ ತೆಗೆದು ಗೂಂಡಾ ವರ್ತನೆ ತೋರಿದ್ದಾರೆ.
ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಜತೆ ಟೋಲ್ ಸಿಬ್ಬಂದಿ ವಾಗ್ವಾದ ಮಾಡಿದ್ದಾರೆ. ಕಳೆದ ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರನ್ನು ಕುಂಬಳಗೊಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾದಲ್ಲಿ ಶಾಸಕರ ಕಾರನ್ನು ತಡೆದಿದ್ದಾರೆ. ಶಾಸಕ ನರೇಂದ್ರಸ್ವಾಮಿ ಬಳಿ ವಾಹನ ಪಾಸ್ ಇದ್ದರೂ ತಡೆದು ಚೆಕ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.
ಈ ವೇಳೆ ಪೋಲಿಸರು ಬರಲಿ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಾರೆ. `ಯಾವ ಪೊಲೀಸರು ಬೇಕಾದರೂ ಬರಲಿ, ನಾನು ನೋಡಿರದ ಪೋಲಿಸಾ’ ಎಂದು ಏಕವಚನದಲ್ಲೇ ಟೋಲ್ ಸಿಬ್ಬಂದಿ ಶಾಸಕರಿಗೆ ಅವಾಜ್ ಹಾಕಿದ್ದಾರೆ.
ನಿಮ್ಮನ್ನ ಹೈವೆಯಲ್ಲಿ ಬಿಟ್ಟಿಯಾಗಿ ಬಿಡ್ತಾ ಇದ್ದೀವಿ ಎಂದು ಶಾಸಕರಿಗೆ ಟೋಲ್ ಸಿಬ್ಬಂದಿ ಅವಾಜ್ ಹಾಕಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…