ಬೆಂಗಳೂರು: ಆರ್ಎಸ್ಎಸ್ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಜನಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ 35.33 ಎಕರೆ ಭೂಮಿ ಹಸಾಂತರಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ತಾವರೆಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಇದನ್ನು ತಡೆ ಹಿಡಿದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ಜನಸೇವಾ ವಿದ್ಯಾಕೇಂದ್ರ ನ್ಯಾಯಬದ್ಧವಗೈ ಕೆಲಸ ಆಡುತ್ತಿದೆ. ನಾನೂ ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಈಗ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದ ಯೋಜನೆಗಳಿಗೂ ತಡೆ ಹಿಡಿದಿರುವುದಲ್ಲದೇ ಮಂಜೂರಾಗಿರುವ ಭೂಮಿ ಹಸ್ತಾಂತರಕ್ಕೂ ತಡೆ ನೀಡಿದೆ. ಈ ಸರ್ಕಾರ ಯಾವ ಹಾದಿಯಲ್ಲಿ ಸಾಗುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…