ಬೆಂಗಳೂರು: ಆರ್ಎಸ್ಎಸ್ಗೆ ಮಂಜೂರಾಗಿದ್ದ ಜಮೀನು ಹಸ್ತಾಂತರಕ್ಕೆ ರಾಜ್ಯ ಸರ್ಕಾರ ತಡೆ ನೀಡುವ ಮೂಲಕ ಶಾಕ್ ನೀಡಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಜನಸೇವಾ ಟ್ರಸ್ಟ್ ಗೆ ಮಂಜೂರಾಗಿದ್ದ 35.33 ಎಕರೆ ಭೂಮಿ ಹಸಾಂತರಕ್ಕೆ ತಡೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ತಾವರೆಕೆರೆಯ ಕುರುಬರಹಳ್ಳಿಯಲ್ಲಿರುವ 35.33 ಎಕರೆ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಈ ಹಿಂದೆ ಬಿಜೆಪಿ ಸರ್ಕಾರ ಮಂಜೂರು ಮಾಡಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ಇದನ್ನು ತಡೆ ಹಿಡಿದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ಜನಸೇವಾ ವಿದ್ಯಾಕೇಂದ್ರ ನ್ಯಾಯಬದ್ಧವಗೈ ಕೆಲಸ ಆಡುತ್ತಿದೆ. ನಾನೂ ಕೂಡ ಜನಸೇವಾ ವಿದ್ಯಾಕೇಂದ್ರದಲ್ಲಿ ಶಿಕ್ಷಣ ಪಡೆದವನು. ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ. ಈಗ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದ ಯೋಜನೆಗಳಿಗೂ ತಡೆ ಹಿಡಿದಿರುವುದಲ್ಲದೇ ಮಂಜೂರಾಗಿರುವ ಭೂಮಿ ಹಸ್ತಾಂತರಕ್ಕೂ ತಡೆ ನೀಡಿದೆ. ಈ ಸರ್ಕಾರ ಯಾವ ಹಾದಿಯಲ್ಲಿ ಸಾಗುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…